

ಕಾವೇರಿಯಿಂದಮಾ ಗೋ
ದಾವರಿವರಮಿರ್ಪ ನಾಡದಾ ಕನ್ನಡದೊಳ್
ಭಾವಿಸಿದ ಜನಪದಂ ವಸು
ಧಾವಳಯ ವಿಲೀನ ವಿಶದ ವಿಷಯ ವಿಶೇಷಂ
ಪದನರಿದು ನುಡಿಯಲುಂ ನುಡಿ
ದುವನರಿದಾರಯಲುಮಾರ್ಪರಾ ನಾಡವರ್ಗಳ್
ಚದುರರ್ ನಿಜದಿಂ ಕುರಿತೋ
ದದೆಯುಂ ಕಾವ್ಯ ಪ್ರಯೋಗ ಪರಿಣತ ಮತಿಗಳ್
ಕಸವರಮೆಂಬುದು ನೆರೆ ಸೈ
ರಿಸಲಾರ್ಪೊಡೆ ಪರ ವಿಚಾರಮುಂ ಧರ್ಮಮುಮಂ
ಕಸವೇಂ ಕಸವರಮೇನು
ಬ್ಬಸಮಂ ಬಸಮಲ್ಲದಿರ್ದು ಮಾಡುವರೆಲ್ಲಂ
ಶ್ರೀವಿಜಯ (ಕ್ರಿ.ಶ. 877)
ಪ್ರತಿಕ್ರಿಯೆ