ಹೊರನಾಡ ಕನ್ನಡಿಗರ ರಾಷ್ಟ್ರೀಯ ಸಮಾವೇಶ

ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ ಸಮರ್ಥ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ನೂರೊಂದು ವರ್ಷಗಳ ಇತಿಹಾಸದಲ್ಲಿ, ಪ್ರಪ್ರಥವಾಗಿ “ಹೊರನಾಡ ಕನ್ನಡಿಗರ ರಾಷ್ಟ್ರೀಯ ಸಮಾವೇಶವನ್ನು” ೨೦೧೬ ವರ್ಷದ ಅಕ್ಟೋಬರ್ ೮ ಮತ್ತು ೯ ದಿನಗಳಂದು ದೇಶದ ರಾಜಧಾನಿಯಾದ ನವದೆಹಲಿಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಿತು. ಈ ಸಮಾವೇಶಕ್ಕೆ ಮಧ್ಯಪ್ರದೇಶದ ಅಮರಕಂಟಕದಲ್ಲಿರುವ ಇಂದಿರಾಗಾಂಧೀ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಹಾಗೂ ದೆಹಲಿ ಕರ್ನಾಟಕ ಸಂಘಗಳು […]