ಸಾಹಿತ್ಯ ಸಮ್ಮೇಳನ-೮೫ : ಕಲಬುರಗಿ
ಫೆಬ್ರವರಿ ೨೦೨೦

ಅಧ್ಯಕ್ಷತೆ: ಎಚ್.ಎಸ್. ವೆಂಕಟೇಶಮೂರ್ತಿ

hs_venkatesh

೮೫ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ

ದಿನಾಂಕ : ೫, ೬ ಹಾಗೂ ೭ ಫೆಬ್ರವರಿ ೨೦೨೦

ಸಮ್ಮೇಳನಾಧ್ಯಕ್ಷರ ಭಾಷಣ

 

ಡಾ. ಎಚ್.ಎಸ್. ವೆಂಕಟೇಶಮೂರ್ತಿ

 

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರೇ…, ಉಪಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಗೋವಿಂದ ಎಂ. ಕಾರಜೋಳ ಅವರೇ…, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯಶ್ರೀ ಸಿ.ಟಿ.ರವಿ ಅವರೇ…, ಕನ್ನಡ ನಾಡಿನ ಹಿರಿಯ ಕವಿಗಳೂ, ನಾಟಕಕಾರರೂ ಆದ ಜ್ಞಾನಪೀಠ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರೇ…, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರೇ…, ವೇದಿಕೆಯ ಮೇಲೆ ಆಸೀನರಾಗಿರುವ ಎಲ್ಲ ಹಿರಿಯರೇ…

 

ಅಖಿಲ ಕರ್ನಾಟಕದ ಈ ಬೃಹತ್ ಕನ್ನಡ ಸಮುದಾಯ, ಕನ್ನಡ ತಾಯಿಯ ರೂಪದಲ್ಲಿ ಕಲಬುರ್ಗಿಯೆಂಬ ತನ್ನ ವರದ ಹಸ್ತದಿಂದ ನನ್ನನ್ನು ಆಶೀರ್ವದಿಸುತ್ತಿರುವ ಈ ಶುಭ ಸಂದರ್ಭವು, ನನ್ನ ಬಾಳಿನ ಅಮೃತ ಕ್ಷಣವೆನ್ನಲು ಅಭಿಮಾನಪಡುತ್ತೇನೆ.  ಅಖಂಡ ಕರ್ನಾಟಕದ ಪ್ರತಿಮಾ ಸ್ವರೂಪಿಯಾದ ಕನ್ನಡ ತಾಯಿಯು ಕನ್ನಡ ಸಾಹಿತ್ಯ ಪರಿಷತ್ತೆಂಬ ನಮ್ಮ ನಾಡಿನ ಹೃದಯ ಸಂಸ್ಥೆಯ ಮೂಲಕ ಈ ಬಾರಿ ಈ ಭಾಗ್ಯವನ್ನು ನನಗೆ ಕರುಣಿಸಿದೆ. ಅದೂ ಇತ್ತೀಚಿಗಷ್ಟೆ ಕಲ್ಯಾಣ ಕರ್ನಾಟಕವೆಂದು ನವನಾಮಕರಣಗೊಂಡ ಈ ಪುಣ್ಯ ಸ್ಥಳದಲ್ಲಿ. ಪುಣ್ಯಸ್ಥಳ ಏಕೆಂದರೆ ಇದು ಅನೇಕ ಗಂಡಾಂತರಗಳ ನಡುವೆ ಕನ್ನಡ ನಂದಾದೀಪವನ್ನು ಎದೆಗೂಡಲ್ಲಿ ಆರದುಳಿಸಿಕೊಂಡು ಬಂದ ಕರಿಮಣ್ಣಿನ ಹಣತೆ. ಶ್ರೀ ಶರಣ ಬಸವೇಶ್ವರ, ಪೂಜ್ಯ ಖ್ವಾಜಾ ಬಂದೇನವಾಜ್, ಮಹಾತ್ಮ ಗಾಂಧಿಯವರ ಭಾವೈಕ್ಯದ ಪರಮ ಆಶಯವನ್ನು ತಮ್ಮ ಬದುಕಿನ ಮೂಲಕವೇ ಅಭಿವ್ಯಕ್ತಿಸಿದ ಪವಾಡ ಭೂಮಿ. ಕನ್ನಡ ಸಾಹಿತ್ಯ ಎಂಬ ಅವಿರತ ಜೀವ ನದಿಯ ತಲಕಾವೇರಿ. ದಾಸಿಮಯ್ಯ, ದುಗ್ಗಲೆ, ನಾಗಚಂದ್ರ, ಕೇಶಿರಾಜ, ಲಕ್ಷೀಷ, ಆವಿನಹಾಳ ಕಲ್ಲಯ್ಯ, ಕಡಕೋಳ ಮಡಿವಾಳಪ್ಪ, ಹಜರತ್ ಸಾಬರು, ಮೊದಲಾದ ಮಹಾಂತರು ಜನ್ಮವೆತ್ತಿದ ಪುಣ್ಯಭೂಮಿಯಿದು. ಭೀಮೆ ಕೃಷ್ಣೆಯರು ತಮ್ಮ ಆರ್ದ್ರ ಹೃದಯದ ಅಭಿವ್ಯಕ್ತಿಗಾಗಿ ನೀರ್ಗಣ್ಣು ತೆರೆದ ಪುಣ್ಯಸ್ಥಳ. ಮಳಖೇಡದ ಈ ಜಾಗರಣ ಸ್ಥಳದಲ್ಲೇ ನೃಪತುಂಗನ ಆಸ್ಥಾನ ಕವಿ ಶ್ರೀವಿಜಯ ಸೈರಣೆಯ ಉದಾತ್ತ ಕಹಳೆ ಮೊಳಗಿಸಿದ್ದು. ಕಲ್ಯಾಣ ಕರ್ನಾಟಕದ ಕಡಕೋಳ ಮಡಿವಾಳಪ್ಪ, ಜಲಾಲ ಸಾಹೇಬ, ರಾಮದಾಸ ನಾಮಾಂಕಿತ ಪಿಂಜಾರ ಬಡಾಸಾಹೇಬ, ಮೊದಲಾದ ತತ್ವಪದಕಾರರ ಧರ್ಮಸಹಿಷ್ಣುತೆಯ ನಿಲುವು ಈ ಹೊತ್ತು ನಮ್ಮ ನಾಡಿಗೆ ಮಾರ್ಗದರ್ಶಕವಾದದ್ದು. ಪರಧರ್ಮ ಪರವಿಚಾರಗಳನ್ನು ಸೇರಿಸುವುದು ಮೊದಲ ನೆಲೆ; ಹಾಗೆ ಸೇರಿಸಿ ಪರಸ್ಪರ ಹೊಕ್ಕಾಡುತ್ತಾ ಒಗ್ಗೂಡಿ ಪ್ರವಹಿಸುವುದು ಮುಂಬರಿವ ನೆಲೆ. ನಾನು ದಶಕಗಳ ಹಿಂದೆ ಓದಿದ ಕೇರಳದ ಮಹಾನ್ ಲೇಖಕ ವೈಕಂ ಮಹಮದ್ ಬಷೀರರು ಒಂದಕ್ಕೆ ಒಂದು ಸೇರಿದರೆ ಆಗುವುದು ಎರಡಲ್ಲ, ಬಹುದೊಡ್ಡ ಒಂದು ಎಂದು ಬಾಲ್ಯದಲ್ಲೆ ಹೊಸ ಗಣಿತ ಬೋಧಿಸಿದ್ದು ನನ್ನನ್ನು ಹಗಲಿರುಳೂ ಕಾಡುವ ಜೀವ ತತ್ತ್ವ. ಅದೇ ನಾನು ಜೀವಿಸಲು ಮತ್ತು ಉಜ್ಜೀವಿಸಲು ಬಯಸುವ ಪರಮಾದರ್ಶ. ಒಂದು ದೇಶದ ಚಲನಶೀಲ ಜೀವನಕ್ಕೆ ಬಹು ಯೋಗ್ಯವಾದ ಪ್ರತೀಕ ಹರಿಯುವ ಜೀವ ನದಿ. ಅದು ಆದಿಯಲ್ಲಿ ಒಂದು. ಮುಂದೆ ಅದರೊಂದಿಗೆ ಬೆರೆತು ಒಂದಾಗುವ ಅದೆಷ್ಟು ತೊರೆ ಹಳ್ಳ ಕಿರುಝರಿಗಳೋ. ನಮ್ಮ ರಾಷ್ಟçಪುರುಷರು ಕಂಡ ದಿವ್ಯವಾದ ಕನಸು ಅದೇ; ಅವರು ಆಚರಣೆಗೆ ತರಲು ಬಾಳುದ್ದಕ್ಕೂ ಸೆಣೆಸಿದ ಆದರ್ಶವೂ ಅದೇ. ರಾಷ್ಟçವಾಹಿನಿ ಎಂಬ ಈ ಮಹಾನದಿಯು ಅಸಂಖ್ಯ ಧ್ವನಿಗಳಲ್ಲಿ ಮಾತಾಡುವ ಏಕಮುಖಿ. ಇದನ್ನೇ ನನ್ನ ಕವಿತೆಯೊಂದು ತಾಯಿ ಭಾರತಿಯು ಹಲವು ನುಡಿಗಳಿಂದ ಕಂದರನ್ನು ಮುದ್ದಿಸುವ ವಾಗ್ವಿದೆ ಎಂದು ಅಂದದ್ದು. ಭಾರತದ ಲಿಪಿಯುಳ್ಳ, ಇಲ್ಲದ, ಎಲ್ಲ ಭಾಷೆಗಳೂ ನಮ್ಮ ಅವ್ವನ ಆಡುನುಡಿಗಳೇ. ಹಾಗಾಗಿ ಅವೆಲ್ಲವೂ ನಮ್ಮ ರಾಷ್ಟç ಭಾಷೆಗಳೇ.  ಹಿಂದಿಯವರೂ ಮಂದಿಯವರೇ ಎಂಬ ಬೇಂದ್ರೆಯ ದರ್ಶನದೀಪ್ತ ನುಡಿ ನಮಗೆ ಸಮ್ಮತ. ಆದರೆ ಹಿಂದಿಗೆ ಸಮಾನತೆಯಲ್ಲೂ ಪ್ರಥಮ ಸ್ಥಾನ ಎಂಬ ಮಾತನ್ನು ನಾನು ಒಪ್ಪಲಾರೆ. ಭಾರತದ ಒಗ್ಗೂಡಿಕೆ ಮತ್ತು ಪ್ರಾಂತ್ಯ ಪ್ರಾಂತ್ಯಗಳ ನಡುವಣ ಸಲೀಸು ವ್ಯವಹರಣಕ್ಕಾಗಿ ಒಂದು ಭಾಷೆ ಅಗತ್ಯವೆನ್ನುವುದಾದರೆ ಅದು ಹಿಂದಿ ಆಗಬಾರದು. ಯಾವ ಭಾಷೆಯು ಯಾವುದೋ ಒಂದು ಪ್ರಾಂತ್ಯದ ಭಾಷೆಯಲ್ಲವೇ, ಯಾವ ಭಾಷೆ ಒಂದು ಕಾಲದಲ್ಲಿ ಭಾರತದ ವೈಚಾರಿಕ ಸಾಹಿತ್ಯಕ ಮತ್ತು ಚಿಂತನೆಯ ಭಾಷೆಯಾಗಿತ್ತೋ ಅಂಥ ಸಂಸ್ಕೃತವನ್ನೋ ಅಥವಾ ಜನಸಾಮಾನ್ಯರ ವ್ಯವಹರಣ ಭಾಷೆಯಾಗಿದ್ದ ಪ್ರಾಕೃತವನ್ನೋ ನಾವು ಸೇತುವೆಯ ಭಾಷೆಯಾಗಿ ಬಹುವಾರ್ಷಿಕ ಯೋಜನೆಯಾಗಿ ಸಂಕಲ್ಪಿಸಿ ರೂಢಿಸುವುದು ಅಗತ್ಯವೆಂದು ನನಗನ್ನಿಸುವುದು. ಯಹೂದಿಗಳು ಯಿದ್ದಿಷ್ ಭಾಷೆಯನ್ನು ರೂಢಿಸಿದಂತೆ. ಸದ್ಯಕ್ಕೆ ಇಂಗ್ಲಿಷ್ ಭಾಷೆಯನ್ನು ಭಾರತದ ಬೇರೆಬೇರೆ ಪ್ರಾಂತ್ಯಗಳ ನಡುವಿನ ಸಂಪರ್ಕ ಭಾಷೆಯಾಗಿ ಬಳಸಬಹುದು. ಅಂಥ ವ್ಯಾವಹಾರಿಕ ಇಂಗ್ಲಿಷನ್ನು ಎಲ್ಲ ಭಾಷಿಕರಿಗೂ ಕೆಲವೇ ತಿಂಗಳ ಭಾಷಾ ಶಿಬಿರಗಳಲ್ಲಿ ಕಲಿಸಬಹುದು. ಆ ಭಾಷೆ ವ್ಯವಹಾರಕ್ಕೆ ಅಗತ್ಯವಿರುವಷ್ಟು ಶಬ್ದಕೋಶದಿಂದ ರೂಪಿತವಾಗಬೇಕು. ಆ ಭಾಷೆಯಲ್ಲಿ ವ್ಯಾಕರಣಕ್ಕಿಂತ ವ್ಯವಹರಣ, ಪ್ರೌಢಿಮೆಗಿಂತ ಸಂವಹನ, ಪರಿಶುದ್ಧಿಗಿಂತ ಪ್ರಯೋಜನ ಮುಖ್ಯವಾಗಬೇಕು. ಅಮೆರಿಕನ್ ಇಂಗ್ಲಿಷ್ ಎಂಬAತೆ ಅದು ನಾವÉÃ ರೂಢಿಸುವ ಭಾರತೀಯರ ನಾಲಗೆಗೆ ಒಗ್ಗುವ ಇಂಡಿಯನಿAಗ್ಲಿಷ್ ಆಗಬೇಕು. ಅಂಥ ಒಂದು ಇಂಗ್ಲಿಷ ಅನ್ನು ಯು.ಆರ್.ಅನಂತಮೂರ್ತಿಗಳು ಅಬ್ಯೂಜಿಂಗ್ ಇಂಗ್ಲಿಷ್ ಎಂದು ಕರೆಯಲು ಬಯಸುವರು. ನಾವದನ್ನು ಬೇಕಾದರೆ “ಅಗ್ಗದಾಂಗ್ಲ” ಎಂದು ಕರೆಯಬಹುದು. ನಮ್ಮ ದÉÃಶದ ಹಾಗÉÃ ವಸಾಹತು ನೆಲೆಯಾಗಿಯೇ ಪಾಡುಪಟ್ಟ ಸಿಂಗಪೂರಿಯನ್ನರ ನಿಲುವು ಬೇರೆಯೇ ಇದೆ. ನಮಗೆ ಇಂಗ್ಲಿಷ್  ಬೇಕು ಆದರೆ ಷೇಕ್ಸ್ಪಿಯರ್ ಬೇಡ ಎನ್ನುವುದು ಅವರ ಭಾಷಾಚಿಂತನೆ. ನಾವು ಹಾಗೆ ಭಾವಿಸಬೇಕಾಗಿಲ್ಲ. ನಮಗೆ ವ್ಯವಹಾರಕ್ಕೆ ಅಗತ್ಯವಿರುವಷ್ಟು ಇಂಗ್ಲಿಷ್ ಸಾಕು. ಷೇಕ್ಸ್ಪಿಯರ್ ಬೇಕು ಎನ್ನುವ ಸಾಹಿತ್ಯ ಜಿಜ್ಞಾಸುಗಳು ಆಳವಾಗಿ ಇಂಗ್ಲಿಷನ್ನು ಒಂದು ಐಚ್ಛಿಕ ಭಾಷೆಯಾಗಿ ಕಲಿಯಬಹುದು. ಹಾಗೆ ಕಲಿತು ಅವರಲ್ಲಿ ಸಮರ್ಥರಾದವರು ಇಂಗ್ಲಿಷ್ ಭಾಷೆಯ ಮಹತ್ವದ ಕೃತಿಗಳನ್ನು-ಸಾಹಿತ್ಯ ವÉÊಚಾರಿಕ ತಾತ್ವಿಕ ವÉÊಜ್ಞಾನಿಕ ಇತ್ಯಾದಿ ವಿಷಯಗಳಿಗೆ ಸಂಬAಧಿಸಿದ ಕೃತಿಗಳನ್ನು- ಕನ್ನಡಕ್ಕೆ ತರಬೇಕು. ದಕ್ಕಬೇಕಾದ ಎಲ್ಲವೂ ನಮಗೆ ಕನ್ನಡದ ಮೂಲಕವÉÃ ದಕ್ಕಬೇಕು. ಬೆಂಗಾಳಿಯ, ಮರಾಠಿಯ, ರಷ್ಯನ್ ಭಾಷೆಯ ಮಹಾನ್ ಲೇಖಕರನ್ನು ನಾವು ಕನ್ನಡ ಅನುವಾದದ ಮೂಲಕವÉÃ ದಕ್ಕಿಸಿಕÉÆಂಡÉವಲ್ಲವÉÃ? ಕನ್ನಡ ಸಂದರ್ಭದಲ್ಲಿ ಅನುವಾದ ಸಂಸ್ಕೃತಿಯನ್ನು ನಾವು ವಿಭಿನ್ನ ನೆಲೆಯಲ್ಲಿ ಗ್ರಹಿಸಿದವರು ಎಂಬುದನ್ನೂ ನಾನಿಲ್ಲಿ ಸೂಚಿಸಬಯಸುತ್ತೇನೆ. ನಮಗೆ ಅನುವಾದವೆಂದರೆ ಮೂಲವನ್ನು ಸಮಕಾಲೀನ ಸಂದರ್ಭಕ್ಕೆ ಆವಾಹಿಸಿಕÉÆಂಡು ನಮ್ಮದÉÃ ಸ್ವಂತದ್ದಾಗಿಸಿಕÉÆಳ್ಳುವ ಕ್ರಿಯಾಶೀಲವೃತ್ತಿ. ಪಂಪ, ಕುಮಾರವ್ಯಾಸರ ಕೃತಿಗಳು ಅಂಥ ಪುನರವತರಣದ ಫಲಗಳಾಗಿವೆ. ಸಂಸ್ಕೃತ ಕನ್ನಡಕ್ಕೆ ಸಂಬAಧಿಸಿ ಆದದ್ದು ಅದÉÃ. ಕನ್ನಡ ಇಂಗ್ಲಿಷ್‌ಗೆ ಸಂಬAಧಿಸಿಯೂ ಆಗಬೇಕಾದದ್ದು ಅದÉÃ. ನಮ್ಮಲ್ಲಿ ಅನುವಾದವೆಂದರೆ ತತ್ಸಮವಲ್ಲ; ತದ್ಭವ.  ಆಧುನಿಕ ಕನ್ನಡದಲ್ಲಿ ಬೇಂದ್ರೆಯವರ ಮೇಘದೂತ, ಕುವೆಂಪು ಅವರ ಶ್ರೀರಾಮಾಯಣದರ್ಶನಂ, ಪುತಿನ ಅವರ ಶ್ರೀ ಹರಿಚರಿತೆ ಆ ಪ್ರವೃತ್ತಿಗೆ ಸೂಕ್ತ ಉದಾಹರಣೆಗಳಾದಾವು. ಇದರ ಜೊತೆಜೊತೆಗÉÃ ಮೂಲವನ್ನು ಮೈಮನಗೆಡಿಸದೆ ನಮ್ಮ ಭಾಷೆಗೆ ತಂದುಕÉÆಳ್ಳುವ ಮೂಲನಿಷ್ಠತೆಯ ತತ್ಸಮ ಅನುವಾದಗಳೂ ಅಕಡೆಮಿಕ್ ದೃಷ್ಟಿಯಿಂದ ತುಂಬ ಅಗತ್ಯ. ಬಂಗಾಳಿ, ಮರಾಠಿ, ರಷ್ಯನ್, ಫ್ರೆಂಚ್, ಚಿಲಿ, ಜರ್ಮನ್ ಭಾಷೆಗಳ ಕೃತಿಗಳು ಈ ಮಾದರಿಯಲ್ಲೇ ನಿಸಾರ್ ಅಹಮದ್, ಪಿ.ಲಂಕÉÃಶ್, ಎನ್.ಎಸ್. ಲಕ್ಷಿö್ಮÃನಾರಾಯಣ ಭಟ್ಟ, ರಾಮಚಂದ್ರಶರ್ಮ, ಎಸ್. ದಿವಾಕÀರ, ಓ.ಎಲï. ನಾಗಭೂಷಣಸ್ವಾಮಿ, ಜಿ.ಎನ್. ರಂಗನಾಥರಾವ್, ಎಂ.ಆರ್. ಕಮಲ, ಜ.ನಾ. ತÉÃಜಶ್ರೀ ಮೊದಲಾದ ಸಮರ್ಥ ಲೇಖಕರಿಂದ ಆಗಿರುವುದಲ್ಲವೆ? ಅದÉÃ ಮಾತು ಇಂಗ್ಲಿಷ್ ಭಾಷೆಯ ಮಹಾಕೃತಿಗಳಿಗೂ ಅನ್ವಯಿಸುವಂತಾಗಬೇಕು. ಭಾರತದಿಂದ ಜಪಾನ್ ಜರ್ಮನಿ ಫ್ರಾನ್ಸ್ ಚೈನಾಕ್ಕೆ ಹÉÆÃಗುವ ಉದ್ಯೋಗಾರ್ಥಿಗಳಿಗೆ ಆಯಾ ದÉÃಶದ ಭಾಷೆಗಳನ್ನು ಕ್ಷಿಪ್ರವಾಗಿ ಕೆಲವÉÃ ತಿಂಗಳಲ್ಲಿ ಕಲಿಸುವ ಶಿಬಿರಗಳಿವೆಯಲ್ಲವೆ? ಹಾಗÉÃ ಪ್ರಾಂತ್ಯದಿAದ ಪ್ರಾಂತ್ಯಕ್ಕೆ ಉದ್ಯೋಗಾರ್ಥ ವಾಗಿಯೋ ವಲಸೆಗಾರರಾಗಿಯೋ ಹÉÆÃಗುವ ಮಂದಿಗೆ ಕ್ಷಿಪ್ರ ಇಂಗ್ಲಿಷ್ ಕಲಿಕೆ ಶಿಬಿರಗಳನ್ನು ರೂಪಿಸಬೇಕು. ಅದÉÃ ರೀತಿ ಭಾರತದ ಬೇರೆ ಬೇರೆ ಪ್ರಾಂತ್ಯಭಾಷೆಗಳನ್ನು ವ್ಯವಹಾರ ದೃಷ್ಟಿಯಿಂದ ಕಲಿಸುವ ಸಮಾನಾಂತರ ಕಲಿಕೆ ಶಿಬಿರಗಳ ವ್ಯವಸ್ಥೆಯೂ ಆಗಬೇಕು. ಕರ್ನಾಟಕಕ್ಕೆ ಬಂದು ವ್ಯವಹರಿಸುತ್ತಿರುವ ಅನ್ಯಭಾಷಿಕರು ಪಂಪ ಕುಮಾರವ್ಯಾಸರ ಬಸವÉÃಶ್ವರರನ್ನು ಓದುವಷ್ಟು ಭಾಷಾ  ಪರಿಣತಿ ಪಡೆಯುವುದು ಅಪÉÃಕ್ಷಣೀಯವÉÃನÉÆÃ ಹËದು. ಆದರೆ ಅದು ಕಡ್ಡ್ಡಾಯವಾಗಬೇಕಾಗಿಲ್ಲ. ನಿತ್ಯ ಜೀವನದಲ್ಲಿ ನಮ್ಮ ಅಂಗಡಿ ಮುಂಗಟ್ಟು ಮಾಲು ಉದ್ಯೋಗ ಕ್ಷೇತ್ರಗಳಲ್ಲಿ ವ್ಯವಹರಿಸುವಷ್ಟು ಅವರು ಕನ್ನಡ ಕಲಿಯುವುದಂತೂ ಅತ್ಯಗತ್ಯ. ನಿತ್ಯ ವ್ಯವಹಾರವನ್ನು ಕರ್ನಾಟಕದಲ್ಲಿ ನೆಲೆಸಿರುವ ಕನ್ನಡÉÃತರರು ಕನ್ನಡದಲ್ಲೇ ನಿಭಾಯಿಸುವುದು ಈವತ್ತಿನ ತುರ್ತು ಅಗತ್ಯ. ಅವರÉÆಂದಿಗೆ ವ್ಯವಹರಿಸಲು ನಮ್ಮ ರÉÊತರು ಕಾರ್ಮಿಕರು ಬ್ಯಾಂಕು ಮಾಲುಗಳಲ್ಲಿ ಕೆಲಸ ಮಾಡುವ ಸ್ಥಳೀಯರು ಬಂದವರ ಭಾಷೆಗೆ ತಾವು ಹಾರುವುದಕ್ಕೆ ಬದಲು, ಅವರು ಕನ್ನಡದಲ್ಲೇ  ವ್ಯವಹರಿಸುವುದು ಅನಿವಾರ್ಯವಾಗುವಂತೆ ಕನ್ನಡದಲ್ಲೇ ವ್ಯವಹರಿಸಬೇಕು. ಶಾಲೆಗಳಲ್ಲಿ ನಾವು ಮಕ್ಕಳಿಗೆ ಕಲಿಸುವ ಇಂಗ್ಲಿಷ್ ಭಾಷೆ ಈ ಉದ್ದೇಶಗಳಿಂದಲೇ ರೂಪಿತವಾಗಬೇಕು. ಸಾಹಿತ್ಯಕ ಸಾಂಸ್ಕೃತಿಕ ಚಿಂತನೆಯ ಭಾಷೆಯಾಗಿ ಇಂಗ್ಲಿಷನ್ನು ಭಾರತದ ಸಮಸ್ತರು ಕಲಿಯಬೇಕಾದ ಶಿರÉÆÃಭಾರವನ್ನು ಮೊದಲು ತಪ್ಪಿಸಬೇಕು. ಕರ್ನಾಟಕಕ್ಕೆ ಸಂಬAಧಿಸಿ ಮಾತಾಡುವುದಾದರೆ, ಕನ್ನಡ, ತುಳು, ಕÉÆಂಕಣಿ, ಕÉÆಡವ, ಉರ್ದು, ಲಂಬಾಣಿ, ಅರೆಭಾಷೆ-ಎಲ್ಲವೂ ಕನ್ನಡಮ್ಮನ ನಲ್ನುಡಿಗಳÉÃ. ಈ ಎಲ್ಲ ದಿವ್ಯ ಮಣಿಗಳನ್ನೂ ಪÉÆÃಣಿಸಿ ಕನ್ನಡ ತಾಯಿ ಧರಿಸಿದ ದಿವಿನಾದ ಕಂಠೀಹಾರ ಕರ್ನಾಟಕದ ಈ ಭಾಷಾ ಸಮುಚ್ಚಯ. ಮನೆಯಲ್ಲಿ ಮನೆಮಾತು. ವ್ಯವಹಾರ ಸಂಪರ್ಕ ಸಂಸ್ಕೃತಿ ಚಿಂತನೆ ಸಾಹಿತ್ಯ ನಿರ್ಮಾಣ ಶಿಕ್ಷಣ ಮುಂತಾದ ಎಲ್ಲ ಜೀವನ ರಂಗದಲ್ಲೂ ನಮ್ಮ ಪರಿಸರ ಭಾಷೆಯಾದ ಕನ್ನಡದ ಹೂಡುವಿಕೆ. ಬೇರೆ ಬೇರೆ ಮನೆಮಾತಿನ ನಮ್ಮ ಮಹಾನ್-ಲೇಖಕ ಸಮುದಾಯವು ಬದುಕಿದ್ದೂ, ಬರೆದದ್ದೂ, ಕನ್ನಡದ ಅಹಂಗÉÆÃಲವನ್ನು ನಕ್ಷತ್ರರೂಪೀ ಪುಷ್ಪಗಳಿಂದ ಅಲಂಕರಿಸಿ ನಾಡಿನ ಅಸ್ಮಿತೆಯನ್ನೂ ಅಭಿಮಾನವನ್ನು ಹೆಚ್ಚಿಸಿದ್ದೂ ಈ ಉಪಕ್ರಮದಲ್ಲಿಯೇ ಅಲ್ಲವೆ? ಬೇಂದ್ರೆ ಮಾಸ್ತಿ ಕಸ್ತೂರಿಯವರ ಮನೆಮಾತು ಯಾವುದÉÃ ಇರಬಹುದು, ಅವರು ಬರೆದದ್ದೂ, ತಮ್ಮ ತಮ್ಮ ಸೃಷ್ಟಿ ಪ್ರತಿಭೆಯ ಮಹಾ ಪ್ರವಹಣಕ್ಕೆ ಬಳಸಿದ್ದೂ, ಬೆಳೆಸಿದ್ದೂ ಸಾವಿರ ವರ್ಷಗಳ ಅರ್ಥಪÉÆÃಷಣೆಯಿಂದ ಪುಷ್ಟವಾಗಿರುವ, ಎಂಥ ಸೂಕ್ಷö್ಮಗಳನ್ನೂ ನಿಭಾಯಿಸುವ ಶಕ್ತಿಯುಳ್ಳ ಸಿರಿಗನ್ನಡವನ್ನು. ಇದÉÃ ನಮ್ಮ ಆದರ್ಶವಾಗಬೇಕೆಂದು ನಿಶ್ಚಯಿಸುವುದರಲ್ಲಿ ಅಖಂಡ ಕರ್ನಾಟಕದ ಸರ್ವೋಚ್ಚ ಹಿತವಿದೆ.  ಕರ್ನಾಟಕ ಎಂಬ ಹೆಸರು ಮಾತ್ರವಲ್ಲ ಕನ್ನಡವೆಂಬ ಉಸಿರೂ ಹಿರಿಯರ ಆಶಯದಂತೆ ನಮ್ಮದಾಗಿ ಸಿದ್ಧಿಸುತ್ತದೆ. ಕರ್ನಾಟಕದಲ್ಲಿ ಜೀವಂತವಾಗಿರುವ ತುಳು ಕÉÆಂಕಣಿ ಮೊದಲಾದ ಉಳಿದ ಭಾಷೆಗಳಲ್ಲಿ ನಿರ್ಮಿತವಾದ ಸಾಹಿತ್ಯವು ವರ್ಷ ಕಳೆಯುವುದರಲ್ಲಿ ಕನ್ನಡ ಭಾಷೆಗೆ ತರ್ಜುಮೆಗÉÆಂಡು ಕರ್ನಾಟಕ ಸಾಹಿತ್ಯಕಲಾಭಿವ್ಯಕ್ತಿಯ ಸಮಗ್ರ ಚಿತ್ರಣ ನಮಗೆ ದÉÆರಕುವಂತಾಗಲು ಒಂದು ಅನುವಾದ ಯೋಜನೆಯನ್ನೇ ನಾವು ಕÉÊಗÉÆಳ್ಳಬೇಕು. ಕನ್ನಡ ಸಾಹಿತ್ಯ ಆಗ ಕರ್ನಾಟಕ ಸಾಹಿತ್ಯವಾಗುತ್ತದೆ. ಹೃದಯದ ಹಿಗ್ಗುವಿಕೆ ದÉÃಹಶಾಸ್ತçದಲ್ಲಿ ದÉÆÃಷ. ಆದರೆ ಸಂಸ್ಕೃತಿಗೆ  ಸಂಬAಧಿಸಿದAತೆ ಅದು ಉಪಾಧÉÃಯ. ರಷ್ಯಾದಲ್ಲಿ ಹಾಗೆ ಆಗುತ್ತಿದೆ. ಕರ್ನಾಟಕದಲ್ಲಿ ಹಾಗೆ ಆಗುವುದು ಅಶಕ್ಯವÉÃನಲ್ಲ. ಮುಂದೆ ಈ ಸೂತ್ರ ಅಖಿಲ ಭಾರತಕ್ಕೂ ಅನ್ವಯಿಸಬೇಕು. ಕರ್ನಾಟಕದ ಮಹಾನ್ ಲೇಖಕರು ವರ್ಷೊಪ್ಪತ್ತಿನಲ್ಲಿ ಭಾರತದ ಹೆಚ್ಚಿನ ಭಾಷೆಗಳಲ್ಲಿ ಪುನರವತರಣ ಗÉÆಂಡು ನಮ್ಮ ಕುವೆಂಪು ಬೇಂದ್ರೆ ಕಾರಂತ ಮೊದಲಾದ ವಿಶ್ವ ಮಟ್ಟದ ಕನ್ನಡ ಲೇಖಕರ ಹೆಸರು ಇಡೀ ಭಾರತದ ಮೂಲೆ ಮೂಲೆಯಲ್ಲೂ ಅನುರಣಿಸು ವಂತಾಗಬೇಕು. ಕನ್ನಡದ ಮಹತ್ ಕೃತಿಗಳು ಇಂಗ್ಲಿಷ್‌ಗೆ ಬರುವುದು ವಿಶ್ವ ನೆಲೆಯಲ್ಲಿ ಕನ್ನಡ ಸಾಹಿತ್ಯವು ಸ್ಥಾಪಿತವಾಗಲು ಅತ್ಯಗತ್ಯ. ಕನ್ನಡ ಕೃತಿಗಳು ಹಿಂದಿ ಮೊದಲಾದ ಭಾರತದ ಇತರ ಭಾಷೆಗಳಿಗೆ ತರ್ಜುಮೆಗÉÆಳ್ಳುವುದು ಅದಕ್ಕಿಂತ ತುರ್ತು ಅಗತ್ಯ. ಇವು ಅಳಿವಿಲ್ಲದೆ ಹರಿಯಬೇಕು. ಬೆರೆಯಬೇಕು. ಒಂದರಿAದ ಒಂದು ಪುಷ್ಟಗÉÆಳ್ಳಬೇಕು. ಕಲಬುರ್ಗಿ ನೆಲವು ಕನ್ನಡ ಮತ್ತು ಉರ್ದುವನ್ನು ಹÉÃಗೆ ಬೆರೆಸಿ ಬಳಸಿ ಹÉÆಸ ಜೀವ ಭಾಷೆಯನ್ನು ನಿರ್ಮಿಸಿ ಸಾರ್ಥಕ್ಯ ಪಡೆಯಿತು ಎಂಬುದನ್ನು ನಾವು ತತ್ವಪದಕಾರರ ಭಾಷಾ ನಿಯೋಗದಲ್ಲಿ ಬಲ್ಲವರಾಗಿರುವೆವು. ಭಾಷೆಗಳ ಬೆರೆಯುವಿಕೆ ಭಾವಗಳ ಬೆರೆಯುವಿಕೆಯೂ ಹËದು. ಅರ್ಥ, ಪರಮಾರ್ಥ, ಪ್ರಯೋಗಾರ್ಥಗಳೆಲ್ಲಾ ಈ ಸಂಯುಕ್ತ ಸಂಗಮದಲ್ಲಿ ಒಡನಾಡಿ ಬೆರೆಯುವವು. ಬೆರೆತೂ ತಮ್ಮ ಮೂಲ ರೂಪವನ್ನು ಜತನವಾಗಿ ಕಾಯ್ದುಕÉÆಳ್ಳುವುವು.  ಮಾರ್ಗವು ದÉÃಸಿಯೊಂದಿಗೂ ದÉÃಸಿಯು ಮಾರ್ಗದÉÆಂದಿಗೂ ಹÉÆಕ್ಕಾಡುತ್ತಾ, ಪುಗುವ  ಫಲಿಸುವ ನಿತ್ಯಾನುಸಂಧಾನವು ನಿರಂತರವಾಗಿ ನಡೆಯುವುದು.

ನಾವು ನಮ್ಮ ಮನೆಯ ಮಕ್ಕಳÉÆಂದಿಗೆ ಮಾತಾಡಬೇಕಾದದ್ದು ನಮ್ಮ ತಾಯ್ನುಡಿಯಲ್ಲಿ. ಅಂದರೆ ತಮಿಳು ಬಂಧುಗಳು ತಮ್ಮ ಮನೆಯಲ್ಲಿ ತಮ್ಮ ಮಕ್ಕಳÉÆಂದಿಗೆ ತಮಿಳನ್ನೇ ಆಡಲಿ. ಆದರೆ ಅವರು ಬೀದಿಗೆ ಬಂದಕೂಡಲೆ ವ್ಯವಹಾರದ ಭಾಷೆಯೂ ಬಹುಕಾಲದಿಂದ ಕರ್ನಾಟಕದಲ್ಲಿ ನೆಲೆಸಿದ ಕಾರಣಕ್ಕಾಗಿ ಮಾತೃಭಾಷೆಯೂ ಆಗಿರುವ ಕನ್ನಡದಲ್ಲೇ ವ್ಯವಹರಿಸಬೇಕು. ಇದು ಕರ್ನಾಟಕಕ್ಕೆ ವಲಸೆ ಬಂದು ನೆಲೆಸಿರುವ ಎಲ್ಲ ಕನ್ನಡÉÃತರರಿಗೂ ಅನ್ವಯಿಸುವಂಥದ್ದು. ನಮ್ಮ ನಮ್ಮ ಮನೆ ಮಾತಲ್ಲಿ ಮಕ್ಕಳÉÆಂದಿಗೆ ಮಾತು. ಆದರೆ ಅವರು ಶಾಲೆಗಳಲ್ಲಿ ಬೀದಿ ಅಂಗಡಿ ಮುಂಗಟ್ಟುಗಳಲ್ಲಿ ವ್ಯವಹರಿಸಬೇಕಾದದ್ದು ಕನ್ನಡದಲ್ಲಿ. ಕಲಿಯಬೇಕಾದದು ಕನ್ನಡದಲ್ಲಿ. ಪ್ರಾಥಮಿಕ ಶಾಲಾ ಶಿಕ್ಷಣವಂತೂ ಕನ್ನಡ ಭಾಷೆಯ ಮೂಲಕವÉÃ ಆಗತಕ್ಕದ್ದು. ಮನೆ ಮಾತು, ಬೀದಿ ಮಾತು ಎಂಬ ಎರಡು ಕಲ್ಪನೆಗಳು ನಮ್ಮ ಅನÉÃಕ ದ್ವಂದ್ವವನ್ನು ನಿವಾರಿಸಬಲ್ಲವು. ಈ ಬೀದಿ ಮಾತು ಎಂಬುದನ್ನೇ ವ್ಯವಹಾರ ಭಾಷೆಯೆಂದೂ ರಾಜ್ಯಭಾಷೆಯೆಂದೂ ಪರಿಸರ ಭಾಷೆಯೆಂದೂ ನಾವು ಪರ್ಯಾಯ ನಾಮಗಳಲ್ಲಿ ಕರೆಯಬಹುದು. ಕನ್ನಡ ಪರಿಸರ ಭಾಷೆಯನ್ನೇ ಮಾತೃಭಾಷೆಯೆಂದು ವ್ಯಾಖ್ಯೆಯನ್ನು ಹಿಗ್ಗಿಸಿಕÉÆಂಡರೆ ನಮ್ಮ ಅನÉÃಕ ವ್ಯಾವಹಾರಿಕ ಸಮಸ್ಯೆಗಳು ಪರಿಹಾರವಾಗುವುವು. ಕಲಿಯುವ ಮತ್ತು ಕಲಿಸುವ ಭಾಷೆಯು ಈ ವ್ಯವಹಾರ ಭಾಷೆಯಾಗಬೇಕು ಎಂದು ಈವರೆಗಿನ ಎಲ್ಲ ಸಂಶÉÆÃಧನೆಗಳೂ ನಮಗೆ ಬೋಧಿಸಿವೆ. ಯುನೆಸ್ಕೋ ಸಿದ್ಧಾಂತವೂ ಅದÉÃ. ಬಿಡಿಗಳೆಲ್ಲಾ ಕೂಡಿ ಒಂದು ಅಖಂಡತ್ವದಲ್ಲಿ ತನ್ನತನ ಉಳಿಸಿಕÉÆಳ್ಳಲು ಕರ್ಮಣಿಸರದಲ್ಲಿ ಕೆಂಬವಳಗಳನ್ನು ಕÉÆÃದ ಈ ಕಂಠೀಹಾರ ನಮ್ಮ ಈವತ್ತಿನ ವ್ಯಾವಹಾರಿಕ ಅಗತ್ಯ. ನಮ್ಮ ಸೃಷ್ಟಿಶೀಲತೆಯನ್ನು ಈ ಅನುಸಂಧಾನವೂ ಈವರೆಗೂ ರಕ್ಷಿಸಿಕÉÆಂಡು ಬಂದಿದೆ. ಯಾವ ಧರ್ಮೀಯನÉÃ ಇರಲಿ, ಹೆಣ್ಣಾಗಿರಲಿ, ಗಂಡಾಗಿರಲಿ, ಬಡವನÉÆÃ ಬಲ್ಲಿದನÉÆÃ ಆಗಿರಲಿ, ಪರಿಸರದ ಭಾಷೆ ಅವನ ಆತ್ಮಾಭಿವ್ಯಕ್ತಿಗೆ ಪೂರಕವೂ ಪÉÆÃಷಕವೂ ಆಗಿ ಮೊದಲಿಂದಲೂ ಹÉÆಂದಿಕÉÆAಡು ಬಂದಿದೆ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಮನೆಮಾತು ತಮಿಳಾಗಿದ್ದರೂ ಅವರ ಸೃಷ್ಟಿಶೀಲತೆ ವಿಜೃಂಭಿಸಿದ್ದು ಪರಿಸರದ ಮಾತಾದ ಕನ್ನಡದಲ್ಲಿ. ತಮಿಳು ತನ್ನಷ್ಟಕ್ಕೆ ಶಕ್ತಿಶಾಲಿಯಾದ ಅಭಿವ್ಯಕ್ತಿಭಾಷೆ ಯಾಗಿದ್ದಾಗಲೂ. ಯಾಕೆಂದರೆ ಭಾಷೆಯೆಂಬುದು ತನ್ನೊಳಗೆ ತಾನು ಆಡಿಕÉÆಳ್ಳುವ ಸಂವÉÃದನೆಯ ಭಾಷೆ ಹÉÃಗÉÆÃ ಹಾಗÉÃ ಪಕ್ಕದವರÉÆಂದಿಗೆ ನಮ್ಮ ಅನುಭವ ದ್ರವ್ಯಗಳನ್ನು ಹಂಚಿಕÉÆಳ್ಳುವ ನಿವÉÃದನೆಯ ಭಾಷೆಯೂ ಆಗಿದೆ. ಭಾಷೆಯ ಪರಮ ಸಾರ್ಥಕ್ಯ ಆಡುವವರ ಆಲಿಸುವವರ ಅನ್ಯೋನ್ಯ ಅನುಬಂಧದಲ್ಲಿರುವುದು. ಹುಟ್ಟಿದ ಮಾತು ನಮ್ಮ ಕಿವಿಗೆ ಹಾಗೂ ನಮ್ಮ ಸಹಜೀವಿಗಳ ಕಿವಿಗೆ ಮುಟ್ಟಿದಾಗಲೇ ಅದಕ್ಕೆ ಭಾಷೆಯ ಅಂತಸ್ತು ಲಭ್ಯವಾಗುವುದು. ಅದಕ್ಕಾಗಿಯೇ ಮಾಸ್ತಿಯವರು ತಾವು ಕುರಿತು ಆಡಬೇಕಾದ ಸಮುದಾಯ ಕನ್ನಡ ಸಂದರ್ಭವಾದ ಕಾರಣ ಕನ್ನಡದಲ್ಲಿ ತಮ್ಮ ಸೃಷ್ಟಿಶೀಲತೆಯನ್ನು ರೂಢಿಸುವುದು ಅನಿವಾರ್ಯವಾಗಿತ್ತು. ಇದು ಬೇಂದ್ರೆ, ಪುತಿನ, ಗÉÆÃವಿಂದ ಪÉÊ, ಪಂಜೆ ಮಂಗÉÃಶರಾವ್, ಷರೀಫ ಸಾಹÉÃಬ, ಕಸ್ತೂರಿ, ಕÉÊಲಾಸಂ, ಗುಂಡಪ್ಪ, ಅಷ್ಟೇಕೆ ಕಲಬುರ್ಗಿ ಪ್ರಾಂತ್ಯದ ಮುಸ್ಲಿಮï ತತ್ವಪದಕಾರರಿಗೂ ಅನ್ವಯಿಸುವ ಮಾತು. ಒಟ್ಟಿನಲ್ಲಿ ನಾವು ನಿಸ್ಸಂದಿಗ್ಧವಾಗಿ ಗ್ರಹಿಸಬೇಕಾದದ್ದು- ನಮ್ಮ ಪರಿಸರ ನುಡಿಯಲ್ಲೇ ನಮ್ಮ ಸರೀಕರÉÆಂದಿಗೆ  ನಾವು ವ್ಯವಹರಿಸಬೇಕು. ಕರ್ನಾಟಕದ ಒಜ್ಜೀವನಶಕ್ತಿ ಕನ್ನಡದಲ್ಲಿರುವುದರಿಂದ ನಮ್ಮ ಒಕ್ಕೊರಲ ಹಾಡುಗಳು ಕನ್ನಡದಲ್ಲಿಯೇ ಅನುರಣಿಸಬೇಕು. ನಮ್ಮ ಪ್ರಾಥಮಿಕ ಕಲಿಕೆಯಂತೂ ನಮ್ಮ ಪರಿಸರದ ಭಾಷೆಯಾದ ಕನ್ನಡದಲ್ಲೇ ನಡೆಯಬೇಕು.

ಕಲಿಕೆ ಎಂಬ ಮಾತು ಬಂದಕೂಡಲೇ ನಮ್ಮ ಶಿಕ್ಷಣ ವ್ಯವಸ್ಥೆ ನಮ್ಮ ಕಣ್ಮುಂದೆ ಮೆರವಣಿಗೆ ನಡೆಸುತ್ತದೆ. ನಾವು ಕಲಿಯಬೇಕಾದದ್ದು ಕನ್ನಡದಲ್ಲಿ. ಜೊತೆಜೊತೆಯಲ್ಲೇ ಮಕ್ಕಳು ಇನ್ನೆರಡು ಭಾಷೆಗಳನ್ನೂ ಭಾಷೆಯಾಗಿ ಕಲಿಯಬಹುದು ಎಂಬ ತ್ರಿಭಾಷಾ ಸೂತ್ರವನ್ನು ನಾವು ಮಾನ್ಯ ಮಾಡುವುದಾದರೆ ಭಾರತದ ಎಲ್ಲ ಪ್ರಾಂತ್ಯಗಳಿಗೂ ಅದು ಸಮಾನವಾಗಿ ಅನ್ವಯಿಸಬೇಕು.  ದಕ್ಷಿಣದ ಮಕ್ಕಳಿಗೆ ಮೂರು ಭಾಷೆ, ಹಿಂದಿ ಮಾತೃಭಾಷೆಯಾಗಿರುವ ಉತ್ತರದ ಬಹುಪಾಲು ಪ್ರಾಂತ್ಯಗಳ ಮಕ್ಕಳಿಗೆ ಎರಡು ಭಾಷೆ ಎಂಬAತಾಗಬಾರದು. ಹಿಂದಿ ಭಾಷೆಯನ್ನು ಆಡುವ ಮಕ್ಕಳು ಹಿಂದಿ ಇಂಗ್ಲಿಷ್‌ಗಳ ಜೊತೆಗೆ ಇನ್ನೊಂದು ತಮ್ಮ ಆಯ್ಕೆಯ ಭಾರತದ ಭಾಷೆಯನ್ನು ಕಲಿಯುವಂತಾಗಬೇಕು. ಒಂದು ತನ್ನ ಪರಿಸರದ ನುಡಿ, ಮತ್ತೆರಡು ಆಯಾ ಮಗುವಿನ ಅಗತ್ಯಕ್ಕೆ ತಕ್ಕಂತೆ ಇನ್ನೆರಡು ಭಾಷೆಗಳು. ಆದರೆ ಕಲಿಯುವ ಭಾಷೆಗಿಂತ ಮಕ್ಕಳಿಗೆ ಕಲಿಸುವ ಭಾಷೆ ಯಾವುದಾಗಬೇಕೆಂಬುದÉà ಈವತ್ತಿನ ಜರೂರು ಸಮಸ್ಯೆ. ಬೇರೆ ಬೇರೆ ವಿಷಯಗಳನ್ನು ಮಕ್ಕಳು ಪರಿಸರದ ನುಡಿಯಲ್ಲೇ ಕಲಿಯುವುದು ಯುಕ್ತ ಎಂಬುದು ಭಾಷಾ ವಿಜ್ಞಾನಿಗಳ, ಶಿಕ್ಷಣ ಪರಿಣತರ, ಭವಿಷ್ಯದ ದೃಷ್ಟಿಯಿಂದ ಚಿಂತಿಸುವ ರಾಷ್ಟç ಪುರುಷರ ನಿಸ್ಸಂದಿಗ್ಧ ನಿಲುವು. ಗಾಂಧಿಯವರ ಪ್ರಕಾರ ಇಂಗ್ಲಿಷ್ ಭಾಷೆ ಮತ್ತು ವಿದ್ಯಾಭ್ಯಾಸ ಕ್ರಮ ಭಾರತ ಅನುಭವಿಸುತ್ತಿರುವ ದÉÆಡ್ಡ ಪೀಡೆ; ಶಾಪ. ಅದರಿಂದ ಭಾರತದ ತರುಣರು ದುರ್ಬಲರೂ ನಿಷ್ಪçಯೋಜಕರೂ ನಾಡಿಗÉà ಪರಕೀಯರೂ ಆಗುತ್ತಿರುವರು. ಇಂಗ್ಲಿಷ್ ವಿಶ್ವಭಾಷೆ – ಅದಕ್ಕಾಗಿ ನಾವು ಇಂಗ್ಲಿಷ್ ಕಲಿಯಬೇಕು ಎಂಬ ವಾದವಿದೆಯಲ್ಲ! ಲೋಹಿಯ ಹÉÃಳುತ್ತಾರೆ: ಇಂಗ್ಲಿಷ್ ಭಾಷೆ ಅಂತಾರಾಷ್ಟಿçÃಯ ಮಾಧ್ಯಮವೆನ್ನುವುದು ಕÉÃವಲ ಕಟ್ಟು ಕತೆ. ಕುವೆಂಪು ಸ್ಪಷ್ಟವಾಗಿ ಹÉÃಳುತ್ತಾರೆ: ಇಂಗ್ಲಿಷ್ ಇನ್ನು ಮುಂದೆ ಎಲ್ಲರೂ ಅಲ್ಲ ಅಗತ್ಯವಿರುವ ಕೆಲವರು ಮಾತ್ರ ಕಲಿಯಬಹುದಾದ ಭಾಷೆ! ವ್ಯವಹಾರಕ್ಕೆ ಇಂಗ್ಲಿಷ್ ಬೇಕು ಎನ್ನುವವರಿಗೆ ಐದಾರು ತಿಂಗಳ ಕ್ಷಿಪ್ರ ಕಲಿಕೆ ಶಿಬಿರಗಳಲ್ಲಿ ಒಂದು ಭಾಷೆಯನ್ನು ಕಲಿಸುವುದು ಸಾಧ್ಯವಿರುವಾಗ ಭಾರತದ ಅಸಂಖ್ಯ ತರುಣರು ತಮ್ಮ ಶಿಕ್ಷಣಾವಧಿಯ ಉದ್ದಕ್ಕೂ ಇಂಗ್ಲಿಷ್ ಕಲಿಯುವ, ಇಂಗ್ಲಿಷ್ ಮೂಲಕ ಎಲ್ಲ ಪಠ್ಯ ವಿಷಯಗಳನ್ನು ಕಲಿಯುವ ಹÉÆರೆ ಯಾಕೆ? ಆರು ತಿಂಗಳಲ್ಲಿ ಕಲಿತು ಬಳಸಬಹುದಾದ ಒಂದು ಭಾಷೆಗಾಗಿ ಇಷ್ಟು ಶ್ರಮವÉÃಕೆ?-ಎಂದು ಪುತಿನ ಉದ್ಗಾರ ತೆಗೆದಿದ್ದಾರೆ.

ಅಷ್ಟಕ್ಕೂ ಶಿಕ್ಷಣ ಮಾಧ್ಯಮ ಇಂಗ್ಲಿಷ್ ಆಗಬೇಕೆಂಬ ನಿಲುವು ವ್ಯಕ್ತಪಡಿಸುತ್ತಿರುವವರು ಯಾರು? ಶಿಕ್ಷಣ ಸಂಸ್ಥೆಗಳನ್ನು ಹಣ ಸಂಪಾದನೆಯ ದಂಧೆ ಮಾಡಿಕÉÆಂಡಿರುವ ವ್ಯಾಪಾರಮುಖಿಗಳು. ಇಂಗ್ಲಿಷ್ ಮಾಧ್ಯಮದ ಬೃಹದ್ಗಾತ್ರದ ನಾಜೂಕು  ಸಂಸ್ಥೆಗಳಿಗೆ ಹಣ ಹೂಡಿ, ದ್ವಿಗುಣ ತ್ರಿಗುಣವಾಗಿ ಹಣ ಬೆಳೆಯಬೇಕೆಂಬ ವ್ಯಾಪಾರÉÆÃದ್ದೇಶಿಗಳು. ಇದನ್ನು ಸಾಧಿಸಲು ಇವರು ನಾನಾ ಬಗೆಯ ವಕ್ರೋಪಾಯಗಳಲ್ಲಿ ತÉÆಡಗುವರು. ಮುಖವಾಡದ ಮಾತುಗಳನ್ನು ಆಡುವರು. ನಮ್ಮ ಮನೆಮಾತು ಬೇರೆ. ನಾವು ಬೇರೆ ಕಡೆಯಿಂದ ಕರ್ನಾಟಕಕ್ಕೆ ಬಂದು ಜೀವನÉÆÃಪಾಯಕ್ಕಾಗಿ ಇಲ್ಲಿ ನೆಲೆಸಿದವರು. ಹಾಗೆ ನೆಲೆಸುವುದಕ್ಕೆ ಭಾರತದ ಸಂವಿಧಾನದ ಸಮ್ಮತಿಯೂ ಇದೆ. ಪ್ರತಿಯೊಂದು ಮಗುವೂ ಮಾತೃಭಾಷೆಯಲ್ಲಿ ಕಲಿಯುವುದು ಅಗತ್ಯವೆಂದಾದಲ್ಲಿ ನೀವು ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿ ಹÉÃರಿದಲ್ಲಿ ಕನ್ನಡÉÃತರ ಅನ್ಯಭಾಷಿಕರ ಮೂಲಭೂತ ಹಕ್ಕಿಗೆ, ಮಕ್ಕಳು ಅವರವರ ಮಾತೃ ಭಾಷೆಯಲ್ಲಿ ಕಲಿಯುವ ಹಕ್ಕಿಗೆ ಚ್ಯುತಿಯೊದಗುವುದು. ನಮ್ಮ ಮೂಲಭೂತ ಹಕ್ಕನ್ನು ನಾವು ಅನುಭವಿಸಲು ಬಿಡಿ ಎಂಬುದÉÆAದು ಮುಖವಾಡದ ಮಾತು.  ಯಾವುದು ಪರಿಸರ ಭಾಷೆಯೋ ಅದರಲ್ಲಿ ಮಾತ್ರ ಮಕ್ಕಳು ಲೋಕಾಕೃತಿಯನ್ನು ಚೆನ್ನಾಗಿ ಗ್ರಹಿಸಬಲ್ಲರು. ಆದ ಕಾರಣ ಕನ್ನಡವು ಶಿಕ್ಷಣ ಮಾಧ್ಯಮವಾಗಬೇಕು ಎನ್ನುವವರು ನಾವು.  ಮಗುವÉÇಂದು ತನ್ನ ಪಂಚÉÃAದ್ರಿಯಗಳಿAದ ಸಹಜವಾಗಿ ಗ್ರಹಿಸಿದ ಲೋಕ ಗ್ರಹಿಕೆಯು ಪರಿಷ್ಕಾರಗÉÆಳ್ಳಬೇಕಾದದ್ದು ಪರಿಸರದ ಭಾಷೆಯಲ್ಲಿ. ಆಗ ಮಾತ್ರ ಅನುಭವ ಮತ್ತು ಅರಿವು ಒಂದಕ್ಕೊAದು ಪೂರಕ-ಪÉÆÃಷಕವಾಗಿ ಮಗುವಿನ ಕಲಿಕೆ ಅನುಭವದ ನೆಲೆಗೆ ಏರುವುದು. ಹಾಗಾಗದೆ ಇಂಗ್ಲಿಷ್ ಭಾಷೆಯಲ್ಲಿ ಬೇರೆ ಬೇರೆ ವಿಷಯಗಳನ್ನು ಮಕ್ಕಳಿಗೆ ಬೋಧಿಸಿದರೆ ಅದು ಮಾಹಿತಿಗಳ ಒದಗಣೆ ಆಗುವುದÉÃ ವಿನಾ ಲೋಕಾನುಭವವು ಭಾಷಾನುಭವವಾಗಿ ದಾಟಿಕÉÆಳ್ಳಲಾರದು.

ಪÉÆÃಷಕರು ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮ ಬೇಕು ಎಂದು ಆಗ್ರಹಿಸುವಾಗ ನಾವಾದರೂ ಏನು ಮಾಡಲಿಕ್ಕೆ ಸಾಧ್ಯ? ಬೇಡಿಕೆಯ ಅನುಸಾರ ಪೂರÉÊಕೆ ನಡೆಸಬೇಕಾದದ್ದು ನಮ್ಮ ಧರ್ಮ ಎನ್ನುತ್ತವೆ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಅಡಳಿತ ಮಂಡಲಿಗಳು. ಅದು ನಿಮ್ಮ ಧರ್ಮ ಹËದು. ಆದರೆ ಅದು ವ್ಯಾಪಾರಿ ಧರ್ಮ. ಶಿಕ್ಷಣ ಒಂದು ವ್ಯಾಪಾರೀ ಉದ್ಯಮವಲ್ಲ. ಅನುಭವವನ್ನು ಮಾತಾಗಿಯೂ ಮಾತನ್ನು ಅನುಭವವಾಗಿಯೂ ಅಖಂಡತ್ವದಲ್ಲಿ ಸಿದ್ಧಿಸಿಕÉÆಳ್ಳುವ ವ್ಯಕ್ತಿರೂಪಣದ ಸೃಷ್ಟಿಶಾಲೆ.  ಇಂಗ್ಲಿಷ್ ಅನ್ನವನ್ನು ಕÉÆಡುವ ಭಾಷೆ ಅನ್ನುವಿರÉÆÃ? ನಮ್ಮ ರÉÊತರು ಇಂಗ್ಲಿಷ್ ಭಾಷೆಯ ಹಂಗಿಲ್ಲದೆ ಅನ್ನ ಬೆಳೆಯುವ ಕÉÆಡುವ ನಿತ್ಯಾನುಷ್ಠಾನದಲ್ಲಿ  ತತ್ಪರರಾಗಿದ್ದಾರೆ. ರಾಜರು ಉದಿಸಲಿ ರಾಜರು ಅಳಿಯಲಿ ಬಿತ್ತುಳುವುದನವ ಬಿಡುವುದೆ ಇಲ್ಲ-ಎಂದು ಕುವೆಂಪು ನÉÃಗಿಲಯೋಗಿ ಕವಿತೆಯಲ್ಲಿ ಹÉÃಳಿದ್ದನ್ನು ಇಲ್ಲಿ ನೆನೆಯೋಣ. ಆ ಕವಿತೆ ಈಗ ನಮ್ಮ ಸರ್ಕಾರ ಅಂಗೀಕರಿಸಿರುವ ರÉÊತಗೀತೆಯೂ ಹËದು. ಲಕ್ಷಾಂತರ ಕೂಲಿ, ಕಾರ್ಮಿಕ, ನಿತ್ಯಸÉÃವಾ ಜನರು ಇಂಗ್ಲಿಷ್ ಭಾಷೆಯ ಹಂಗಿಲ್ಲದೆ ಸ್ವಾಭಿಮಾನಿ ಬದುಕು ಬದುಕುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡವನ್ನು ಅನ್ನದ  ಭಾಷೆಯಾಗಿ ರೂಢಿಸುವುದೆಂದರೆ, ಕರ್ನಾಟಕದಲ್ಲಿ ಕನ್ನಡಿಗರಿಗೆ ಸಿಂಹ ಪಾಲು ಉದ್ಯೋಗ ಮೀಸಲಾತಿಯನ್ನು ಜಾರಿಗೆ ತರುವುದು ಬಹು ಮುಖ್ಯ ಅಗತ್ಯ. ಅನ್ನ ಸಂಪಾದನೆಯು ಕÉÊಂಕರ್ಯ ಮತ್ತು ದುಡಿಮೆಯ ಕಾಯಕಯೋಗವಲ್ಲದೆ ಭಾಷಾ ಪರಿಣತಿಯ ಫಲವಲ್ಲ ಎಂಬುದನ್ನು ನಾವು ಗ್ರಹಿಸಬೇಕಾಗಿದೆ. ಇಂಗ್ಲಿಷ್ ಮೀಡಿಯಮ್ಮಿನಲ್ಲಿ ಓದುವ ನಮ್ಮ ಮಕ್ಕಳು ಹೆಚ್ಚು ಜಾಣರಾಗುವರÉÆÃ?  ಕರ್ನಾಟಕದ ದÉÆಡ್ಡ ವಿಜ್ಞಾನಿಗಳು, ಉದ್ಯಮಿಗಳು, ಕವಿ, ಸಾಹಿತಿಗಳು, ರಾಜಕೀಯ ಮುತ್ಸದ್ದಿಗಳು, ದÉÃಶಕ್ಕಾಗಿ ತಮ್ಮ ಬಾಳನ್ನೇ ಧಾರೆಯೆರೆದ ರಾಷ್ಟçಪುರುಷರು ಕನ್ನಡ ಭಾಷೆಯಲ್ಲೇ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ ಈಗ ಸಾಧನೆಯ ಉತ್ತುಂಗ ಶಿಖರವÉÃರಿರು ವಂಥವರು. ಐನ್ಸ್ಟೈನ್‌ರಂಥ ಮಹಾ ವಿಜ್ಞಾನಿಗೂ ಜರ್ಮನ್ ಭಾಷೆಯೇ ಜ್ಞಾನದ ಮಾಧ್ಯಮವಾಗಿತ್ತು. ಇಂಗ್ಲಿಷ್ ಸಂವಹನದ ಭಾಷೆ ಮಾತ್ರ ಆಗಿತ್ತು. ಇಂಗ್ಲಿಷ್ ಭಾಷೆಯಲ್ಲಿ ಉಲುಹುವ ಅರಗಿಳಿಗಳೆಲ್ಲಾ ಕÉÆÃಹಂ ಧ್ಯಾನದಲ್ಲಿ ಮುಳುಗುವ ಹಂಸಗಳಾಗಲಾರರು.  ಅಸ್ಖಲಿತವಾಗಿ ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಾತಾಡುವ ವಾಗ್ಮಿಗಳು ಸತ್ಯವಾಚಿಗಳೆಂದೂ ಹÉÃಳಲಾಗದು. ಅದಕ್ಕೇ ಭಾಷೆಯು ಹÉÃಗಿರಬೇಕೆಂದು ವಿವÉÃಚಿಸುವಾಗ ಬಸವಣ್ಣನವರು ಮುತ್ತಿನಹಾರ, ಮಾಣಿಕ್ಯದ ದೀಪ್ತಿ, ಸ್ಫಟಿಕದ ಶಲಾಕೆ ಇವುಗಳ ಅನಂತರ ಲಿಂಗ ಮೆಚ್ಚಿ ಅಹುದೆನ್ನಬೇಕೆಂಬ ಪರಮಪ್ರಮೇಯವನ್ನು ಶೃಂಗ ಸ್ಥಾನದಲ್ಲಿ ಇರಿಸಿದ್ದು. ನಡೆ ನುಡಿ ಒಂದಾಗದ ಬದುಕು ಅಕ್ಷಮ್ಯವೆಂದು ಸತ್ಯನಿಷ್ಠುರವಾದ ಕಟೂಕ್ತಿಯನ್ನಾಡಿದ್ದು. ಪದವಿಟ್ಟಳುಪದÉÆಂದಗ್ಗಳಿಕೆ ಎಂದು ಕುಮಾರವ್ಯಾಸ ತನ್ನ ಭಾಷೆಯ ಮೂಲಧರ್ಮವನ್ನು ಕುರಿತು ಹÉÃಳುವನಲ್ಲ, ಆ ಪದ್ಯವನ್ನೊಮ್ಮೆ ನೆನೆಯೋಣ. ಅದು ಕÉÃವಲ ಕವಿಯ ಲೇಖನಿಯ ಅಸ್ಖಲನವನ್ನು ಕುರಿತಷ್ಟೇ ಮಾತಾಡುತ್ತಿಲ್ಲ. ಪದ ಎಂಬ ಮಾತಿಗೆ ಕನ್ನಡದಲ್ಲಿ ಎರಡರ್ಥವಿದೆ. ಒಂದು ಭಾಷೆಯ ಶಬ್ದ; ಇನ್ನೊಂದು ವ್ಯಕ್ತಿತ್ವದ ಚಾರಿತ್ರ‍್ಯದ ದೃಢತೆ.  ಪದವಿಟ್ಟು ಅಳುಪದಿರುವುದು ಚಾರಿತ್ರ‍್ಯಶುದ್ಧಿ, ಭಾಷಾ ಶುದ್ಧಿ ಎರಡನ್ನೂ ಒಂದÉÃ ಉಸುರಿಗೆ ಇಬ್ಬಾಯಿಖಡ್ಗದಂತೆ ನುಡಿಯುತ್ತಾ ಇದೆ. ಬಸವಣ್ಣನವರ ನಡೆ ನುಡಿಯ ಅಭÉÃದವನ್ನು ಕುಮಾರವ್ಯಾಸನ ರೂಪಕ ಬೇರÉÆಂದು ಪರಿಭಾಷೆಯಲ್ಲಿ ಉದ್ಗರಿಸುತ್ತಿದೆ. ನಮ್ಮ ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವ ಉದ್ಯಮಿಗಳು ಮಾತೃಭಾಷೆಯಲ್ಲಿ ಕಲಿಯುವುದು  ಅನ್ಯಭಾಷಿಕರ, ಅಲ್ಪಸಂಖ್ಯಾತರ ಹಕ್ಕು ಮತ್ತು ಪÉÆÃಷಕರ ಬೇಡಿಕೆಯ ಒತ್ತಾಯ ಎನ್ನುವ ವಾದವನ್ನು ಮುಂದಿಟ್ಟು ಉಚ್ಚ ನ್ಯಾಯಾಲಯಕ್ಕೆ ಮೊರೆಹÉÆÃಗುತ್ತಾರೆ. ಆಗ ಉಚ್ಚ ನ್ಯಾಯಾಲಯವು  ಕನ್ನಡ ಪರವಲ್ಲದ, ಮಕ್ಕಳ ಶಿಕ್ಷಣ ಮಾಧ್ಯಮವನ್ನು ನಿರ್ಧರಿಸುವುದು ಪÉÆÃಷಕರ ಹಕ್ಕು ಅನ್ನುವ ತೀರ್ಪು ನೀಡುವುದು. ಹಿಂದೆ ಅದÉÃ ಉಚ್ಚ ನ್ಯಾಯಾಲಯವು ಕನ್ನಡ (ಅಂದರೆ ತಾಯ್ನುಡಿ-ಪರಿಸರ ನುಡಿ) ಶಿಕ್ಷಣ ಮಾಧ್ಯಮವಾಗಬೇಕು ಎಂಬ ತೀರ್ಪು ನೀಡಿದ್ದು ವಿಸ್ಮರಣೆಗೆ ಸಲ್ಲುತ್ತದೆ. ಮತ್ತೆ ನಾವು ನ್ಯಾಯಾಂಗದ ಮೊರೆಹೋಗಬೇಕಾದ, ಕಾನೂನಿನ ಹÉÆÃರಾಟ ನಡೆಸಬೇಕಾದ ತಿರುಮುರುವು ಸ್ಥಿತಿ ಉಂಟಾಗುವುದು. ಶಿಕ್ಷಣ ಮಾಧ್ಯಮ ಕನ್ನಡ ಆಗಬೇಕು ಎನ್ನುವು ತತ್ತ÷್ವಕ್ಕೆ ಕಾನೂನಿನ ತÉÆಡಕುಗಳು ಉಂಟಾಗುವುವು.

ಕಾಲಕಾಲಕ್ಕೆ ನಮ್ಮ ಸರ್ಕಾರೀ ನಿಲುವುಗಳೂ ವ್ಯತ್ಯಸ್ತಗÉÆಳ್ಳುತ್ತಾ ಹÉÆÃಗಿರುವುದನ್ನೂ ನಾನು ಈ ಮಹಾಸಮ್ಮೇಳನದ ಸಮಕ್ಷಮ ಪ್ರಸ್ತಾಪಿಸ ಬಯಸುತ್ತೇನೆ. ಮೊದಲು ಕನ್ನಡ ಪರ ನಿಲುವು. ಬಳಿಕ ಅನುದಾನ ಪಡೆಯುವ ಮತ್ತು ಪೂರ್ಣ ನಿರ್ವಹಣೆಯ ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಶಿಕ್ಷಣ ಮಾಧ್ಯಮ! ಕÉÆನೆಗೆ ಸರ್ಕಾರವÉÃ ಇಂಗ್ಲಿಷï ಮಾಧ್ಯಮದ ಒಂದು ಸಾವಿರ ಪ್ರಾಥಮಿಕ ಶಾಲೆಗಳನ್ನು ಸ್ಥಾಪಿಸುವ ಹಿಡಿದ ಹಠ ಬಿಡದ ಮೊಂಡು ನಿಲುವು ತಾಳುವುದು. ಹಾಗೆ ಸ್ಥಾಪಿತವಾದ ಇಂಗ್ಲಿಷ್ ಮಾಧ್ಯಮದ ಪ್ರÉÊಮರಿ ಶಾಲೆಗಳ ಭವಿಷ್ಯ ಏನಾಯಿತೆಂಬುದು ಅಧ್ಯಯನದ ವಿಷಯ. ಇದಕ್ಕಾಗಿ ಯಾವ ಪೂರ್ವ ಸಿದ್ಧತೆಗಳು ನಡೆದವು? ಯಾವ ಶಿಕ್ಷಣ ಸಮಿತಿಯ ಸಲಹೆ-ಸೂಚನೆ ಪಡೆಯಲಾಯಿತು? ಇಂಗ್ಲಿಷ್ ಮಾಧ್ಯಮದಲ್ಲಿ ಮಕ್ಕಳಿಗೆ ಬೋಧಿಸುವ ಶಿಕ್ಷಕರು ಸಿದ್ಧವಿದ್ದಾರೆಯೇ? ನಾನು ಈಚಿನ ಅಭ್ಯಾಸದಿಂದ ಉಪಲಬ್ಧವಿರುವ ಅಂಕಿ ಅಂಶಗಳ ಪ್ರಕಾರ ಇಂಗ್ಲಿಷ್ ಶಾಲೆಗಳು ಶಿಕ್ಷಣ ಮಟ್ಟದ ಇಳಿವಿಗೆ ಕಾರಣವಾಗಿವೆ. ಜಿ.ಎಸ್.ಜಯದÉÃವ, ಎಚ್.ಎನ್.ಮುರಳೀಧರ ಸಂಪಾದಿಸಿರುವ ನೆಲದ ನುಡಿಯ ನಂಟು ಎಂಬ, ಕನ್ನಡಿಗರೆಲ್ಲ ಮನನ ಮಾಡಲೇಬೇಕಾದ ಕೃತಿಯಲ್ಲಿ ಈ ಬಗ್ಗೆ ಅಂಕಿ ಅಂಶ ಸಹಿತ ಮಾಹಿತಿಗಳಿವೆ. ಮಕ್ಕಳು ಶಾಲೆ ಬಿಡುವ ಪ್ರಮಾಣ ಹೆಚ್ಚಾಗುತ್ತಿದೆ. ಅವರು ನಿಸ್ತೇಜರೂ ನಿರ್ವೀರ್ಯರೂ ಆಗುತ್ತಿರುವರು. ಇದು ಕನ್ನಡ ಮಕ್ಕಳು ಮತ್ತು ಕನ್ನಡ ಭಾಷೆಯ ಸ್ಥಿತಿ ಮಾತ್ರವಲ್ಲ. ಭಾರತದ ಎಲ್ಲ ಪ್ರಾಂತ್ಯಗಳಲ್ಲೂ  ಕಾಣುತ್ತಿರುವ ಸಾಮಾನ್ಯ ದೃಶ್ಯ. ಆಂಗ್ಲಮಾಧ್ಯಮದ ಮೂಲಕ ಮಾಹಿತಿಗಳನ್ನು ನೆನಪಿನ ಶÉÊತ್ಯಾಗಾರಕ್ಕೆ ಸುರಿದುಕÉÆಳ್ಳುತ್ತಿರುವ ಎಲ್ಲ ಮಕ್ಕಳ ಸ್ಥಿತಿಯೂ ಅದÉÃ ಆಗಿದೆ.

ಶಿಕ್ಷಣ ಮಾಧ್ಯಮ ಮತ್ತು ಸಾಹಿತ್ಯ ಸಂಸ್ಕೃತಿಯ ಸಂಬAಧವೂ ನಾವು ಊಹಿಸಲಾರದಷ್ಟು ನಿಕಟವಾದದ್ದು. ನಾವೆಲ್ಲಾ ಹಳ್ಳಿಗಳಲ್ಲಿ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯಲ್ಲಿ ಅಭ್ಯಾಸ ಮಾಡಿದವರು. ಕಲಿಯಬೇಕಾದ ಪಠ್ಯಗಳನ್ನೆಲ್ಲಾ ಕನ್ನಡದಲ್ಲೇ ಕಲಿತವರು. ಒಂದು ವಿಷಯ ಕಲಿಯುವಾಗ ವಸ್ತು ಮತ್ತು ಅದನ್ನು ಸೂಚಿಸುವ ಭಾಷೆ ಎರಡನ್ನೂ ಕಲಿಯುವ ದ್ವಿಮುಖೀ ಒತ್ತಡವಿಲ್ಲದೆ ಬೆಳೆದವರು. ನಮಗೆ ಎಲೆ ಗÉÆತ್ತಿತ್ತು. ಒಲೆ ಗÉÆತ್ತಿತ್ತು. ಅಲ್ಲಿ ನಮ್ಮ ತಾಯಿ ಉರುವಲು ಹಾಕಿ ಅನ್ನ ತಯಾರಿಸುವುದು ಗÉÆತ್ತಿತ್ತು. ಸೂರ್ಯ ರಶ್ಮಿ ಮತ್ತು ಅದರ ಶಾಖ ಗÉÆತ್ತಿತ್ತು. ಮರದ ಎಲೆ, ಮರಕ್ಕೆ ಅನ್ನ ತಯಾರಿಸಿ ಬಡಿಸುವ ಅಡುಗೆ ಮನೆ ಎಂಬುದು ನಮಗೆ ಅನುಭವವÉÃದ್ಯವಾದ ಸಂಗತಿ. ಇನ್ನೂ ಉಚಾಯಿಸಿ ಹÉÃಳಬೇಕೆಂದರೆ ಅದು ಸಂಗತಿಯೇ ಅಲ್ಲ. ಒಂದು ನಿತ್ಯಾನುಭವದ ವಿಸ್ತರಣೆ. ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳಿಗಾದರೆ ಗ್ರಹಿಸಬೇಕಾದ ಸಂಗತಿ ಮತ್ತು ಮಾಧ್ಯಮದ ಭಾಷೆ ಈ ಎರಡರ ನಡುವೆ ಯಾವಾಗಲೂ ಬಿರುಕುಗಳು. ಪುಸ್ತಕವನ್ನು ಕಪಾಟಿನಲ್ಲಿ ಅವರು ಜೋಡಿಸುವರು ಅಷ್ಟೆ. ಅದು ವಾತಾಪಿ ಜೀರ್ಣೋಭವ ಆಗಿ ಅನುಭವವಿದಿತವಾಗದು. ಹÉÆಟ್ಟೆಯ ಮೇಲೆ ಕಟ್ಟಿದ ಕಟ್ಟೋಗರ ಹಸಿವನ್ನು ನೀಗಬಲ್ಲುದೆ? ಮಸ್ತಕದಲ್ಲಿ ತುರುಕಿದ ಪುಸ್ತಕ ಮನÉÆÃಗತವಾಗಬಲ್ಲುದೆ?

ನಾವು ಪ್ರÉÊಮರಿ ಮಾಧ್ಯಮಿಕ ಪ್ರËಢ ಶಾಲೆಗಳಲ್ಲಿ ಏನನ್ನು ಕಲಿತೆವÉÇÃ ಅದಕ್ಕೆ ಪೂರಕವೂ ಪÉÆÃಷಕವೂ ಆದಂಥ ಸಂಗತಿಗಳನ್ನು ಶಾಲೆಯ ಹÉÆರಗೆ ಕಲಿತದ್ದು ಮಾತ್ರ ಸತ್ಯ. ರಾತ್ರಿ ನÉÆÃಡಿದ ಯಕ್ಷಗಾನ, ಸಂಜೆ ನಡೆದ ಭಜನಾ ಮಂಡಲಿಯ ಪಾದಯಾತ್ರೆ, ಅವರು ಒಕ್ಕೊರಲಲ್ಲಿ ಹಾಡುತ್ತಾ ಹÉÆÃಗುತ್ತಿದ್ದ ತತ್ವಪದಕಾರರ ಪದ, ಗÉÆÃವಿಂದಾ ಎಂದು ಕೂಗುತ್ತಾ ಮನೆಮನೆಗೆ ಬರುತ್ತಿದ್ದ ದಾಸಯ್ಯಗಳ ದಾಸರ ಹಾಡುಗಳು, ಅವರು ತರುವ ಎಣ್ಣೆ ಗಿಮಟಿನ ಕಾಲ್ದೀಪ, ಮಿರುಗುಟ್ಟುವ ಗÉÆÃಪಾಲ ಬುಟ್ಟಿ, ಗಂಟೆ ಜಾಗಟೆಯ ಭÉÆÃರ್ಗರೆತ….ಅದೆಲ್ಲಾ ಶಾಲೆಯ ಹÉÆರಗೆ ನಾವು ಕಲಿಯುತ್ತಿದ್ದ ಜೀವನ ವÉÊವಿಧ್ಯದ ಒಂದು ಎದೆಹೊಗುವ ಅನುಭವ. ನಮ್ಮ ಈ ನಿತ್ಯಾನುಭವ ಶಾಲೆಗಳಲ್ಲಿ ಭಾಷೆಯ ಮೂಲಕ ಪಠ್ಯಗಳ ಮೂಲಕ ಭಾಷಾವತರಣಗÉÆಳ್ಳುವ ಚÉÆÃದ್ಯ ಸಂಭವಿಸುತ್ತಾ ಇತ್ತು. ಅನುಭವ ಮತ್ತು ಕಲಿಕೆಯ ನಡುವೆ ಅಂತರವಿರಲಿಲ್ಲ. ಮಾಧ್ಯಮಿಕ ಶಾಲೆಯಲ್ಲಿದ್ದಾಗಲೇ ನಾನು ಕಾರಂತ, ಅನಕೃ, ತರಾಸು, ಕಟ್ಟೀಮನಿ ಅವರ ಕಾದಂಬರಿಗಳನ್ನು ಓದಲು ಪ್ರಾರಂಭಿಸಿದ್ದೆ. ಪ್ರËಢ ಶಾಲೆಗಳಲ್ಲಿ ನರಸಿಂಹ ಶಾಸ್ತಿç ಎಂಬ ಹೆಸರಿನ ನನ್ನ ಅಧ್ಯಾಪಕರು ಶಾಲೆಯ ಪಠ್ಯವನ್ನು ಮಾತ್ರವಲ್ಲ ನಮಗೆ ಕುವೆಂಪು ಅವರ ಮಲೆನಾಡಿನ ಚಿತ್ರಗಳು, ಕÉÊಲಾಸಂ ಅವರ ಟೊಳ್ಳುಗಟ್ಟಿ ನಾಟಕವನ್ನು ಓದಿ ಹÉÃಳುತ್ತಾ ಇದ್ದರು. ಆ ವÉÃಳೆಗೆ ನಾನು ಕುವೆಂಪು ಬೇಂದ್ರೆಯವರ ಕವಿತೆಗಳನ್ನು ಓದುವ ಹುಚ್ಚಿಗೆ ಬಿದ್ದಿದ್ದೆ. ನಾನು ಬರೆದರೆ ಆಗ ಕನ್ನಡದಲ್ಲೇ ಬರೆಯಬೇಕಾಗಿತ್ತು.  ಕನ್ನಡ ಆ ಕಾಲದಲ್ಲಿ ಅನ್ಯಥಾ ಶರಣಂ ನಾಸ್ತಿ ಎಂಬ ಆತ್ಮ ಕ್ಷೇಮದ ನೆಲೆಯಲ್ಲಿತ್ತು. ನಾನು ನನ್ನ ಗೆಳೆಯರು ಕನ್ನಡದಲ್ಲೇ ಓದಿದೆವು ಕನ್ನಡದಲ್ಲೇ ಬರೆದೆವು. ಈವತ್ತು ನಮ್ಮ ಮಕ್ಕಳು ಮೊಮ್ಮಕ್ಕಳು ಓದಿದರೆ ಇಂಗ್ಲಿಷ್ ನಾವೆಲ್ಲುಗಳನ್ನು ಓದುವರು. ಬರೆದರೆ ಇಂಗ್ಲಿಷ್ ಕಥೆ ಕವಿತೆ ಬರೆಯುವರು.  ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಅವಜ್ಞತೆಗೆ ಒಳಗಾಯಿತೆಂದರೆ, ಎಲ್ಲವನ್ನೂ ಮಕ್ಕಳಿಗೆ ನಾವು ಇಂಗ್ಲಿಷಲ್ಲೇ ಬೋಧಿಸುವುದಾದರೆ ಕನ್ನಡದಲ್ಲಿ ಹÉÆಸದನ್ನು ಹುಟ್ಟಿಸುವ ಶಕ್ತಿಯನ್ನು ನಮ್ಮ ಮಕ್ಕಳು ಕಳೆದುಕÉÆಳ್ಳುವರು. ಸೃಷ್ಟಿಯ ಶಕ್ತಿಯನ್ನು ಕಳೆದುಕÉÆಳ್ಳುವಂತೆಯೇ ಗ್ರಹಿಕೆಯ ಶಕ್ತಿಯನ್ನೂ ಕಳೆದುಕÉÆಳ್ಳುವರು. ಬಹಳ ಸಮರ್ಥರಾದ ಹಿರಿಯ ಸಾಹಿತಿಗಳು ಈಗ ಮಕ್ಕಳಿಗಾಗಿ ಕವಿತೆ, ಕಥೆ, ನಾಟಕಗಳನ್ನು ಬರೆಯುತ್ತಿರುವರು. ಹÉÆಸಬರÉÆಂದಿಗೆ ಚೆನ್ನವೀರ ಕಣವಿ, ಎನ್.ಎಸ್. ಲಕ್ಷಿö್ಮÃನಾರಾಯಣ ಭಟ್ಟ, ಕೆ.ವಿ.ತಿರುಮಲೇಶ, ಚಂದ್ರಶÉÃಖರ ಕಂಬಾರ, ವÉÊದÉÃಹಿ, ಈಗ ಮಕ್ಕಳ ಸಾಹಿತ್ಯ ರಚನೆಯಲ್ಲೂ ತೊಡಗಿರುವರು. ಪ್ರತಿಭಾಶಾಲಿಗಳಾದ ಹÉÆಸ ಲೇಖಕರ ದÉÆಡ್ಡ ಪಟ್ಟಿಯೇ ಇದೆ. ಮಕ್ಕಳ ಸಾಹಿತ್ಯದ ಬೃಹತ್ ಸಂಪುಟಗಳು, ಮೀಮಾಂಸಾ ಕೃತಿಗಳು ಹÉÆರಬಂದಿವೆ. ಈ ವಿಷಯದಲ್ಲಿ ಬೊಳುವಾರು ಮತ್ತು ಆನಂದ ಪಾಟೀಲರನ್ನು ನಾವು ವಿಶÉÃಷವಾಗಿ ನೆನೆಯಬೇಕಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ಮಕ್ಕಳ ಪತ್ರಿಕೆ ಹÉÆರಬರುತ್ತಿರುವುದು.  ಸಮಸ್ಯೆ ಇರುವುದು ಸೃಷ್ಟಿಶೀಲರಲ್ಲಲ್ಲ.  ಗ್ರಾಹಕರಲ್ಲಿ. ಮಕ್ಕಳ ನಾಲಗೆಯಿಂದ ಕನ್ನಡದ ಬೀಜಾಕ್ಷರಗಳÉÃ ಮಾಯವಾಗುತ್ತಿರಲು ಅವರಾದರೂ ಕನ್ನಡ ಕೃತಿಗಳನ್ನು ಓದಲು ಹÉÃಗೆ ಸಮರ್ಥರಾಗುವರು? ಇದೆಲ್ಲದರ ಮೂಲ ತÉÆಡಕು ಕನ್ನಡ ಶಿಕ್ಷಣ ಮಾದ್ಯಮವಾಗಿ ಚ್ಯುತಗÉÆಳ್ಳುತ್ತಿರುವ ದುರಂತದಲ್ಲಿಯೇ ಇದೆ. ಈವತ್ತಿನ ಸಾಹಿತ್ಯದ ಪರಿಸ್ಥಿತಿಯನ್ನೇ ನÉÆÃಡಿ. ನಡುಪ್ರಾಯದಿಂದ ಕೆಳಗಿನ ಎಷ್ಟು ಮಂದಿ ಗಟ್ಟಿ ಕೃತಿಗಳನ್ನೀಗ ನಿರ್ಮಾಣ ಮಾಡುತ್ತಿದ್ದಾರೆ?  ಬೆರಳೆಣಿಕೆಯಷ್ಟು ಮಂದಿ ಸಿಕ್ಕಾರು. ಬರೆಯಬಲ್ಲ ನಮ್ಮ ಯುವಕ ಯುವತಿಯರೆಲ್ಲ ಎಲ್ಲಿ ಹÉÆÃದರು? ಅಥವಾ ಯಾವ ಭಾಷೆಯಲ್ಲಿ ತಮ್ಮ ಅನುಭವವನ್ನು ತÉÆÃಡಿಕÉÆಳ್ಳುತ್ತಿರುವರು? ಇಪ್ಪತ್ತನÉÃ ಶತಮಾನದ ದÉÆಡ್ಡ ಲೇಖಕರನ್ನು ನಮ್ಮ ಈವತ್ತಿನ ತರುಣ ಪೀಳಿಗೆ ಆಳವಾಗಿ ಅಭ್ಯಾಸ ಮಾಡುತ್ತಿದೆಯೇ?  ಇಪ್ಪತ್ತನÉÃ ಶತಮಾನದ ಕಥೆಯೇ ಇಷ್ಟಾದರೆ ಹತ್ತು, ಹನ್ನೆರಡು, ಹದಿನÉÊದು, ಹದಿನಾರು, ಈ ಶತಮಾನಗಳಲ್ಲಿ ಹÉÆರಬಂದ ನಮ್ಮ ಅತ್ಯುತ್ಕೃಷ್ಟ ಕೃತಿಗಳನ್ನು ಎಷ್ಟು ಮಂದಿ ಹÉÆಸ ಲೇಖಕರು ಹಚ್ಚಿಕÉÆಂಡು ಓದುತ್ತಿರುವರು? ಈ ವಿಸ್ಮರಣೆಯು ಉಂಟುಮಾಡುವ ದಾರುಣ ಪರಿಣಾಮವÉÃನು? ಇಂಥವು ಉತ್ತರಿಸಲು ದುಸ್ಸಾಧ್ಯವಾದ ಪ್ರಶ್ನೆಗಳು. ಈ ಪರಿತಾಪದ ನೆಲೆಯಲ್ಲೇ ನನ್ನ ಅವತರಣಿಕೆ ಮಾಲೆ, ಕುಮಾರವ್ಯಾಸ ಕಥಾಂತರದAಥ ಮರು ಓದಿನ ಕೃತಿಗಳು ರಚಿತವಾದದ್ದು.

ನಮ್ಮ ಸಾವಿರ ವರ್ಷದ ಕನ್ನಡ ಸಾಹಿತ್ಯ ಪರಂಪರೆಯ ನೆನಪನ್ನು ನಮ್ಮ ಹÉÆಸ ಪೀಳಿಗೆಯ ಮನಸ್ಸಲ್ಲಿ ಮತ್ತೆ ಉಜ್ಜೀಸುವ ಯೋಜನೆಗಳನ್ನು ಕÉÊಗÉÆಳ್ಳುವ ತುರ್ತುಯತ್ನಗಳನ್ನು ನಾವು ಕÉÊಗÉÆಳ್ಳಲೇಬೇಕಾಗಿದೆ. ಮೊದಲೆಲ್ಲಾ ಪಠ್ಯಗಳಲ್ಲಾದರೂ ಪ್ರಾಚೀನ ಸಾಹಿತ್ಯದ ಒಂದೆರಡು ವೃತ್ತಗಳÉÆÃ, ಕಂದಗಳÉÆÃ, ಕಥಾಭಾಗಗಳÉÆÃ,  ವಚನಖಂಡಗಳÉÆÃ, ಕೀರ್ತನೆ-ಸುಳಾದಿ-ಉಗಾಭÉÆÃಗಗಳÉÆÃ, ರಗಳೆಗಳÉÆÃ ನಮ್ಮ ಮಕ್ಕಳಿಗೆ ಪರಿಚಯವಾಗುತ್ತಿದ್ದವು. ಈಗ ಶಿಕ್ಷಣ ಕ್ರಮದಿಂದಲೇ ಕನ್ನಡ ಭಾಷೆ-ಆ ಭಾಷೆಯಲ್ಲಿ ಮೈದಾಳಿದ ಸಾಹಿತ್ಯ ಮತ್ತು ವÉÊಚಾರಿಕತೆ ನಮ್ಮ ಮಕ್ಕಳಿಂದ ದೂರವಾಗುತ್ತಿದೆ. ಕನ್ನಡದಲ್ಲಿ ಕಲಿಯುವ ಮಾತಿರಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಶಾಲೆಗಳು ಕೂಡ ದಿನÉÃದಿನೇ ಕಡಿಮೆಯಾಗುತ್ತಿವೆ.  ಹಳ್ಳಿಗಳಲ್ಲಿ ನಾವು ಮಕ್ಕಳಿದ್ದಾಗ ಇದ್ದಂಥ ಸಾಹಿತ್ಯಕ ಸಾಂಸ್ಕೃತಿಕ ಸಾಮುದಾಯಿಕ ಜೀವನ ಕ್ರಮಗಳು ಈಗ ಕಾಣೆಯಾಗುತ್ತಾ ಇವೆ. ನಮ್ಮೂರಲ್ಲಿ ಕುಂಬಾರಿಕೆ ನಡೆಯುತ್ತಾ ಇಲ್ಲ. ಮರಗೆಲಸದಲ್ಲಿದ್ದ ಗುಡಿಕಾರರು ಕಾಣುತ್ತಿಲ್ಲ. ಕÉÊಮಗ್ಗಗಳು ಬಂದಾಗಿವೆ. ನಾಟಕ ಯಕ್ಷಗಾನ ಪ್ರಯೋಗಗಳು ಕ್ಷೀಣಿಸುತ್ತಾ ಇವೆ. ಭಜನಾಮಂಡಲಿಗಳು ಕಾಣವು. ಕುರಿತÉÆÃದೆಯೂ ಸರ್ವಜ್ಞ ಬಸವಣ್ಣ ಕುಮಾರವ್ಯಾಸ ಲಕ್ಷಿö್ಮÃಶ ಪುರಂದರ ಕನಕರನ್ನು ಅವರ ಕೃತಿಗಳನ್ನೂ ಸಲೀಲವಾಗಿ ಮಾತುಗಳಲ್ಲಿ ಪ್ರಸ್ತಾಪಿಸುತ್ತಿದ್ದ ನಮ್ಮ ಹಳ್ಳಿಯ ಹತ್ತು ಸಮಸ್ತರು ಈಗ ಕಾಲಹತಿಯಿಂದ ನಿಶ್ಶೇಷವಾಗಿದ್ದಾರೆ. ಹರಟೆಕಟ್ಟೆ ದÉÃವಾಲಯದ ಅಂಗಳ ನಿರ್ಜನವಾಗಿವೆ. ಹಳ್ಳಿ ಹಳ್ಳಿಯಲ್ಲೂ ಕುಡಿಯುವ ಅಡ್ಡೆಗಳು. ನಮ್ಮಲ್ಲಿಂದು ಸಮುದಾಯ ನೆರೆಯುತ್ತಿದ್ದ ಬಾವಿ ಕೆರೆ ತÉÆರೆ ಗುಡಿ ದರ್ಗ ಮಸೀದಿ ಚರ್ಚುಗಳು ಜನಜೀವನದಿಂದ ದೂರವಾಗಿ ನಮ್ಮ ಮನೆ ಮತ್ತು ಅದರಲ್ಲಿ ಪ್ರತಿಷ್ಠಾಪಿತವಾಗಿರುವ ವಿಶ್ವದ ಬೇಕು ಬೇಡದ ಎಲ್ಲ ಮಾಹಿತಿಗಳನ್ನು ನಡುಮನೆಗೆ ತಂದು ಸುರಿಯುವ ಟೀವಿಗಳು, ಮನುಷ್ಯ ಸಂಬAಧಗಳನ್ನು ದೂರವಾಣಿಯ ಮೂಲಕ ನಿಜದ ಭ್ರಮೆಗೆ ತರುವ ವ್ಯವಸ್ಥೆ ದ್ವಿಗುಣಿತವಾಗುತ್ತಾ ಇದೆ. ಮನೆಮನೆಗಳಿಗೀಗ ನಲ್ಲಿಗಳು ಬಂದು, ಊರಿಗೆ ಬಂದÉÆÃರು ಬಾವಿಗೆ ಬರÉÆÃಲ್ವೆ? ಎಂಬ ಗಾದೆ ಅರ್ಥಹೀನವೆನಿಸುತ್ತಿದೆ. ಎಂದರೆ ಸಮುದಾಯದ ಬದುಕು ನಮ್ಮಲ್ಲಿ ತೀವ್ರಗತಿಯಲ್ಲಿ ಕ್ಷೀಣಿಸುತ್ತಿದೆ. ನಮ್ಮ ಅರ್ಥವ್ಯವಸ್ಥೆ ಮತ್ತು ಜೀವನ ಕ್ರಮ ತ್ವರಿತ ಗತಿಯಲ್ಲಿ ಬದಲಾಗುತ್ತಿರುವ ಸಂದರ್ಭದಲ್ಲಿ ನಾವು ಏನನ್ನು ಗಳಿಸುತ್ತಿದ್ದೇವೆ ಏನನ್ನು ಕಳೆದುಕÉÆಳ್ಳುತ್ತಿದ್ದೇವೆ ಎಂದು ಪರ್ಯಾಲೋಚಿಸುವ ವ್ಯವಧಾನವೂ ನಮಗೆ ಇಲ್ಲವಾಗಿದೆ. ಹಳ್ಳಿ ಕಳಾಹೀನವಾಗುತ್ತಿದೆ. ಹಳ್ಳಿಗಳನ್ನು ಪÉÆÃಷಿಸುತ್ತಿದ್ದ ಗÉÆÃವರ್ಧನಗಿರಿಗಳೂ ಈಗ ನುಣ್ಣಗೆ ನಿಂತಲ್ಲೇ ಮಂಗಮಾಯವಾಗುತ್ತಿವೆ. ನದಿಗಳು ವಿಜೃಂಭಿತ ಚರಂಡಿಗಳಾಗುತ್ತಿವೆ. ಕಾಡುಗಳು ಉಪವನವಾಗುವುದಿರಲಿ ಖಂಡತುAಡಾಗಿ ಕÉÊಕಾಲು ಕಡಿದು ಬಟ್ಟಬಯಲಾಗಿ, ಮನೆಕಟ್ಟುವ ನಿವÉÃಶನಗಳಾಗಿ ರೂಪಾಂತರಗÉÆಳ್ಳುತ್ತಿವೆ. ಪರಿಸರದ ನಾಶವೆಂಬುದು ಜೀವಜಗತ್ತಿನ ನಾಶ….ವಿಶÉÃಷವಾಗಿ ಬಡವರ ನಾಶ. ಮಾಧವ ಗಾಡ್ಗೀಳ್ ಎಂಬ ಪರಿಸರ ವಿಜ್ಞಾನಿಯು ಕಾಗದದ ಉದ್ಯಮಕ್ಕಾಗಿ ಬಿದಿರ ಕಾಡುಗಳು ನಾಶವಾಗಿ ಬಿದಿರು ಬುಟ್ಟಿ ಚಾಪೆ ಹೆಣೆಯುವ ಜನರ ಬದುಕು ಹÉÃಗೆ ದುಸ್ತರವಾಯಿತು ಎನ್ನುವುದನ್ನು ವಿವರಿಸಿದ್ದಾರೆ. ಕಾಂಕ್ರಿಟ್ ಬಂದು ನಾಡಹೆಂಚುಗಳು ಮಾಯವಾದವು. ಮಾರುಕಟ್ಟೆಯಲ್ಲಿ ಸಿದ್ಧ ವಸ್ತುಗಳ ಮಾಸ್ ಒದಗಣೆಯಿಂದಾಗಿ ಗ್ರಾಮಜೀವನ ತನ್ನ ಸ್ವಾವಲಂಬೀ ಸತ್ವವನ್ನು ಕಳೆದುಕÉÆಂಡಿದೆ. ಬೀಸುವ ಕುಟ್ಟುವ ಕÉÃರುವ ಉತ್ತು ಬಿತ್ತುವ ನಿತ್ಯ ವ್ಯವಸಾಯಗಳು, ದÉÊಹಿಕ ಶ್ರಮಗಳು ಕಾಣದಾಗಿ ರೆಡಿಮೇಡ್ ಸಾಮಗ್ರಿಗಳು ಮತ್ತು ಪ್ರತಿಯೊಂದು ಕಾಯಕಕ್ಕೂ ಪರ್ಯಾಯವಾಗಿ ಒದಗಿರುವ ಯಂತ್ರ ವ್ಯವಸ್ಥೆ ಗಾಮೀಣ ಬದುಕನ್ನು ನಿರ್ಜೀವಗÉÆಳಿಸುತ್ತಿದೆ. ಒಟ್ಟಾರೆ ಸಮುದಾಯದ ಬದುಕು ಕಾಣೆಯಾಗುತ್ತಿದೆ. ಹಳ್ಳಿಗಳಲ್ಲೇ ಹೀಗಾಗುತ್ತಿದೆ ಎನ್ನುವಾಗ ನಗರದ ವಿಷಯ ಹÉÃಳುವುದÉÃ ಬೇಡ. ಬದುಕು ಕÉÃವಲ ತನಗಾಗಿ, ತಾನು ಮೊದಲು, ಬಳಿಕ ಇನ್ನೊಬ್ಬರು ಎಂಬುದು ಈವತ್ತು ಆಧುನಿಕ ಸಂಸ್ಕೃತಿಯ ನಿತ್ಯ ಬೋಧೆ. ವಿಮಾನಯಾನದಲ್ಲಿ ಕಾಣುವ ಸೂಚನಾಪತ್ರ ತಾವು ನÉÆÃಡಿರಬಹುದು. ಅವಗಢ ಸಂಭವಿಸಿದಲ್ಲಿ ಮೊದಲು ನಿಮ್ಮ ರಕ್ಷಣೆ ಮಾಡಿಕÉÆಳ್ಳಿ. ಆಮೇಲೆ ಉಳಿದವರ ಕಡೆ ಗಮನಕÉÆಡಬಹುದು! ತಾನು ಬದುಕಬೇಕಾದದ್ದು ತನಗಾಗಿಯಲ್ಲ, ಇತರರಿಗಾಗಿ ಎನ್ನುವುದು ಭಾರತೀಯ ಜೀವನಕ್ರಮದ ಪ್ರಧಾನ ಆಶಯವಾಗಿತ್ತು. ರಾಮಾಯಣದಲ್ಲಿ ಬರುವ ಸಂಪಾತಿ ಮತ್ತು ಜಟಾಯುವಿನ ಕಥೆ ನನಗೀಗ ನೆನಪಾಗುತ್ತಿದೆ. ಸಂಪಾತಿ ಮತ್ತು ಜಟಾಯು ಇಬ್ಬರು ಮಹಾ ಗೃಧ್ರಸÉÆÃದರರು. ಒಮ್ಮೆ ಇಬ್ಬರೂ ಜಿದ್ದು ಕಟ್ಟಿ ಆಕಾಶದಲ್ಲಿ ಎತ್ತರೆತ್ತರಕ್ಕೆ ಹಾರತÉÆಡಗಿದ್ದಾರೆ. ಜಟಾಯು ಅಣ್ಣ ಸಂಪಾತಿಯನ್ನು ಮೀರಿಸಬೇಕೆಂಬ ಜಿದ್ದಿನಲ್ಲಿ ಅವನಿಗಿಂತ ಮೇಲೆ ಸೂರ್ಯನ ಸಮೀಪಕ್ಕೆ ಹಾರತÉÆಡಗಿದಾಗ ಅಣ್ಣ ಸಂಪಾತಿ ತಮ್ಮನನ್ನು ಉಳಿಸಬೇಕೆಂಬ ಉದ್ದೇಶದಿಂದ ಜಟಾಯುವುಗಿಂತ ಮೇಲೆ ಹಾರಿ ಸೂರ್ಯನ ತೀಕ್ಷ÷್ಣ ಕಿರಣಗಳಿಂದ ತಮ್ಮನನ್ನು ರೆಕ್ಕೆ ಹರಡಿ ರಕ್ಷಿಸುತ್ತಾನೆ. ತಮ್ಮ ಕ್ಷೇಮವಾಗಿ ಉಳಿದ; ಅಣ್ಣ ರೆಕ್ಕೆ ಸೀದು ಭೂಮಿಗೆ ಬಿದ್ದ. ಆಧುನಿಕ ವಿಮಾನಪಕ್ಷಿಯ ಬೋಧನೆ ಸಂಪಾತಿಯ ನಿಲುವಿಗೆ ತದ್ವಿರುದ್ಧವಾಗಿದೆ!

ಈಗ ಸಮಾಜದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರಕ್ಕೆ ಈ ಸ್ವಾರ್ಥ ಕÉÃಂದ್ರಿತ ಜೀವನ ಸಿದ್ಧಾಂತವÉÃ ಪ್ರಧಾನಕಾರಣವಾಗಿದೆ. ನಮಗೆ ಗಣಿ ಮಾಡಿ ಹಣ ಮಾಡುವುದು ಮುಖ್ಯ. ಖನಿಜ ಸಂಪತ್ತು ಈ ದಂದಾದುAದಿಯಲ್ಲಿ ನಾಶವಾದರೆ ಭವಿಷ್ಯದ ಗತಿಯೇನು ಎಂಬ ಚಿಂತೆ ಯಾರಿಗೂ ಇಲ್ಲ. ನಾವು ಹೆಚ್ಚು ಹೆಚ್ಚು ಕಾರ್ಖಾನೆಗಳನ್ನು ಮಾಡÉÆÃಣ. ಅವುಗಳ ತ್ಯಾಜ್ಯವಸ್ತುವಿನಿಂದ ನಮ್ಮ ಜೀವನದಿಗಳು ಕಾಳಿಂದಿ ಮಡುಗಳಾದರೆ ಆಗಲಿ. ಈವತ್ತಿನ ಲಾಭವÉÃ ನಮ್ಮ ಪರಮ ಗುರಿ. ಸ್ವಾರ್ಥಕ್ಕಾಗಿ ಪರ್ವತಾರಣ್ಯಗಳ ನಾಶ. ಅಲ್ಲಿ ವಾಸಿಸುತ್ತಿದ್ದ ವನ್ಯಜೀವಿಗಳ ನಾಶ. ನದಿ ನದಗಳ ನಾಶ. ವಿಶಿಷ್ಟ ಜಾತಿಯ ಮರಗಿಡಗಳ ನಾಶ! ಇಕಾಲಜಿ ಎಂಬ ತತ್ವವನ್ನು ಗಾಳಿಗೆ ತೂರಿ ನಾನಾಯಿತು ಮೂರುಲೋಕವಾಯಿತು ಎಂದು ಕÉÆÃಟ್ಯಂತರ ಲೆಕ್ಕದ ಐಶ್ವರ್ಯ ಸಂಪಾದನೆ ಅವ್ಯಾಹತವಾಗಿ ನಡೆಯುತ್ತಿದೆ. ನಮ್ಮ ಗುರಿ  ಬಡತನದ ನಿರ್ಮೂಲನವಲ್ಲ. ಐಶ್ವರ್ಯದ ಧ್ರುವೀಕರಣ. ಬಡವ ಬಲ್ಲಿದರ ನಡುವೆ ನಿತ್ಯ ನಿತ್ಯ ವಿಸ್ತರಿಸುವ ಮಹಾಕಂದರ. ಸರ್ವರಿಗೆ ಸಮಪಾಲು ಬೆಳದಿಂಗಳು ಅನ್ನುವುದು ಕÉÃವಲ ಆದರ್ಶದ ಮಾತಾಗಬೇಕೆ? ಸಂಪತ್ತು ನಾಚಿಕೆಯ ಸಂಗತಿಯಾಗದೆ ನಾಡಿನ ಉದ್ಧಾರವಿಲ್ಲ. ಸಿರಿವಂತರು ಕೆರೆ ಕÉÆಳ್ಳಗಳಂತೆ ಅಗತ್ಯಬಿದ್ದಾಗ ಹಳ್ಳಿಗೆ ನೀರುಣಿಸುವ ಟ್ರಸ್ಟಿಗಳಾಗಬೇಕೆಂದು ಪುತಿನ ಯಾವಾಗಲೂ ಹÉÃಳುತ್ತಿದ್ದರು. ಐಟಿಗಳ ಹದ್ದಿನ ಕಣ್ಣನ್ನೂ ತಪ್ಪಿಸಿ ನಗನಿಕ್ಷೇಪಗಳು ಕತ್ತಲ ರಕ್ಷಾ ಕÉÆÃಣೆಗಳಲ್ಲಿ ವೃದ್ಧಿಸುತ್ತಲೇ ಇವೆ. ತಾಯ ಮೊಲೆ ಹಾಲೇ ವಿಷವಾಗಿ ಕÉÆಲ್ಲಲೆಳಸಿದರೆ ಕಾಯಬಲ್ಲ ದÉÊವವನ್ನು ಎಲ್ಲಿಂದ ತರÉÆÃಣ?

ಈವತ್ತಿನ ಸಮಾಜದಲ್ಲಿ ಆತ್ಮರಕ್ಷಣೆ ಮುಖ್ಯವಾಗಿದೆಯೇ ವಿನಾ ಆರ್ತರಕ್ಷಣೆಯಲ್ಲ. ಮಹಾರಥಿ ಎಂಬ ಪರಿಕಲ್ಪನೆಯನ್ನು ನಾನೀಗ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಯಾವನು ಯುದ್ಧದಲ್ಲಿ ತನ್ನ ಸಾರಥಿಯನ್ನು, ತನ್ನ ರಥವನ್ನು, ತನ್ನ ಧ್ವಜವನ್ನು, ತನ್ನ ಕುದುರೆಗಳನ್ನು, ತನ್ನ ಸÉÃನೆಯನ್ನು ಮತ್ತೂ ತನ್ನನ್ನು ರಕ್ಷಿಸಿಕÉÆಳ್ಳಲು ಸಮರ್ಥನÉÆÃ ಅವನು ಮಾತ್ರ ಮಹಾರಥ. ಈವತ್ತೂ ಈ ತತ್ವವನ್ನು ನಮ್ಮ ನಾಯಕರಿಗೆ ಅನ್ವಯಿಸಿ ಅರ್ಥೈಸಬೇಕಾಗಿದೆ. ಯಾರು ತನ್ನ ನೆಲೆಯನ್ನು, ನಾಡನ್ನು, ಕಾಡು ಬೆಟ್ಟಗಳನ್ನು, ಅಲ್ಲಿ ಜೀವಿಸುವ ಮೃಗಪಕ್ಷಿಗಳನ್ನು, ತನ್ನ ಆಶ್ರಿತರನ್ನು, ಮತ್ತೂ ಕÉÆನೆಗೆ ತನ್ನನ್ನು ರಕ್ಷಿಸಿಕÉÆಳ್ಳಬಲ್ಲನÉÆÃ ಆತ ಈವತ್ತಿನ ರಾಜಧರ್ಮದ ಮಹಾರಥಿ. ಅಂಥವರನ್ನು ನಾವೀಗ ಶಬರಿ ಶ್ರದ್ಧೆಯಲ್ಲಿ ನಿರೀಕ್ಷಿಸಬೇಕಾಗಿದೆ. ನಮ್ಮ ನಾಡು ನುಡಿ ನಾಡವರನ್ನು ಕಾಯ್ದು ದÉÃಶದ ಅಖಂಡತ್ವವನ್ನು ಕಾಯ್ದುಕÉÆಳ್ಳಬೇಕಾಗಿದೆ.

ನಿಜಾಮರ ದಬ್ಬಾಳಿಕೆ, ಅದರಲ್ಲೂ ರಜಾಕಾರರ ಉಗ್ರಗಾಮಿ ಹಾವಳಿಗಳಿಂದ ಕನ್ನಡಿಗರು ಆಗ ಗಡಿಶಿಬಿರಗಳನ್ನು ಸ್ಥಾಪಿಸಿಕÉÆಂಡು ಹÉÆÃರಾಡಬೇಕಾಯಿತು. ಮತಾಂಧರಾದ ರಜಾಕಾರರ ಸಂಘಟನೆ ನಿಜಾಮರ ಸÉÊನ್ಯ ಮತ್ತು ಪÉÆಲೀಸಿಗಿಂತ ನಾಲಕ್ಕು ಪಟ್ಟು ಹೆಚ್ಚು ಇತ್ತು ಎಂಬುದು ಅದು ಹÉÃಗೆ ಒಂದು ಪರ್ಯಾಯ ಮಿಲಿಟರಿ ವ್ಯವಸ್ಥೆಯೇ ಆಗಿತ್ತು ಎಂಬುದು ನಮ್ಮ ಗಮನಕ್ಕೆ ತರುವುದು. ಅಂಥ ಸಂದರ್ಭದಲ್ಲಿ ಅಸ್ಮಿತೆಯ ರಕ್ಷಣೆಗಾಗಿ ಹುಟ್ಟಿಕÉÆಂಡವು ಗಡಿಶಿಬಿರಗಳು. ಇಂಥ ಆತ್ಮಜಾಗರಣೆಯ ಶಿಬಿರಗಳು, ಕನ್ನಡವನ್ನು ಉಳಿಸಿ ಬೆಳೆಸಲು ಶಿಕ್ಷಣ ವಲಯದಲ್ಲಿ ನಡೆದ ಮಹತ್ವದ ಪ್ರಯೋಗಗಳು, ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ದÉÃಶಪ್ರೇಮ, ಭಾಷಾಪ್ರೀತಿ ಮತ್ತು ರಾಜಕೀಯ ಎಚ್ಚರಗಳು ಈ ಪ್ರಾಂತ್ಯದಲ್ಲಿ ಅನÉÃಕ ರಾಷ್ಟçಪುರುಷರ, ರಾಜಕೀಯ ಮುತ್ಸದ್ದಿಗಳ ಹುಟ್ಟಿಗೆ ಕಾರಣವಾಗಿವೆ.

ಭಾಷಾವಾರು ಪ್ರಾಂತ್ಯ ಪ್ರಾಪ್ತಿಗಾಗಿ ಎಂತೆAಥ ಆತ್ಮಬಲಿಗಳು ನಡೆದವು, ನಿಸ್ವಾರ್ಥ ಹÉÆÃರಾಟಗಳು ನಡೆದವು ನಾವೀಗ ನೆನೆಯಬೇಕಾಗಿದೆ. ಕರ್ನಾಟಕದ ಏಕೀಕರಣಕ್ಕಾಗಿ ಬಳ್ಳಾರಿಯ ರಂಜಾನ್‌ಸಾಬï ಆತ್ಮತ್ಯಾಗ ಮಾಡಿಕÉÆಂಡರು- ತೆಲುಗು ಏಕೀಕರಣಕ್ಕಾಗಿ  ಪÉÆಟ್ಟಿಶ್ರೀರಾಮುಲು ಆತ್ಮಾರ್ಪಣೆ ಮಾಡಿಕÉÆಂಡAತೆ. ಕರ್ನಾಟಕದಲ್ಲಿ ವಿಲೀಕರಣಗÉÆಳ್ಳಲು ಈ ಕಲ್ಯಾಣ ಕರ್ನಾಟಕವು ನಡೆಸಿದ ಹÉÆÃರಾಟವÉÃನು ಸಾಮಾನ್ಯವಾದುದೆ? ಕಲಬುರ್ಗಿ ಪ್ರಾಂತ್ಯವು ಕನ್ನಡ ಸಾಹಿತ್ಯದ ಉಗಮಸ್ಥಲ ಎಂದು ಇತಿಹಾಸ ಬಲ್ಲವರೆಲ್ಲರಿಗೂ ಗÉÆತ್ತು. ಕನ್ನಡ ಭಾಷೆಯ ಪ್ರಥಮ ಕೃತಿ ಕವಿರಾಜಮಾರ್ಗ ಸೃಷ್ಟಿಯಾದದ್ದು ಕಲಬುರ್ಗಿ ಪ್ರಾಂತ್ಯದಲ್ಲಿ.  ಕ್ರಿಸ್ತಶಕ ಎಂಟರಿAದ ಹತ್ತನÉÃ ಶತಮಾನದ ವರೆಗೆ ಕರ್ನಾಟಕವನ್ನು ಆಳಿದ ರಾಷ್ಟçಕೂಟರಿಗೆ ಮಳಖೇಡ ರಾಜಧಾನಿಯಾಗಿತ್ತು. ಕವಿರಾಜಮಾರ್ಗದ ಕರ್ತೃ ಶ್ರೀವಿಜಯ ರಾಷ್ಟçಕೂಟ ದÉÆರೆ ನೃಪತುಂಗನ ಆಸ್ಥಾನ ಕವಿ. ಕವಿವರ್ಯ ಬೇಂದ್ರೆಯವರು ಹÉÃಳುವಂತೆ ಜÉÊನರ ಕಾವ್ಯದ, ಶರಣರ ವಚನದ, ದಾಸರ ಹಾಡಿನ ಬೀಡು ಕಲ್ಯಾಣ ಕರ್ನಾಟಕ. ದÉÃವರದಾಸಿಮಯ್ಯ – ಆತನ ಪತ್ನಿ ದುಗ್ಗಲೆ, ಕೆಂಭಾವಿ ಭÉÆÃಗಣ್ಣ, ಏಕಾಂತದರಾಮಯ್ಯ, ಕÉÆÃಲೂರು ಶಾಂತಯ್ಯ, ಷಣ್ಮುಖಸ್ವಾಮಿ ಮೊದಲಾದ ಮಹನೀಯರು ಈ ಪ್ರಾಂತ್ಯಕ್ಕೆ ಸÉÃರಿದವರು. ಸಮೀಪದಲ್ಲಿರುವ ದÉÃವನೂರು ಕವಿ ಲಕ್ಷಿö್ಮÃಶನ ಜನ್ಮಸ್ಥಲವೆಂದು ಈಗಲೂ ಅನÉÃಕ ವಿದ್ವಾಂಸರು ಅಭಿಪ್ರಾಯಪಡುವರು. ದಾಸ ಸಾಹಿತ್ಯಕ್ಕೂ ಕಲಬುರ್ಗಿಯ ಕÉÆಡಿಗೆ ಅಸಾಮಾನ್ಯವಾದುದÉÃ. ಸುರಪುರದ ಆನಂದದಾಸ, ಮಣ್ಣೂರ ದಾಸ, ನಾಯಕಲï ರಾಮಾಚಾರ್ಯ ಹೀಗೆ ಅನÉÃಕರನ್ನು ನಾವೀಗ ನೆನೆಯಬೇಕಾಗಿದೆ. (ಹೆಚ್ಚಿನ ವಿವರಗಳಿಗೆ ಕಲಬುರ್ಗಿ ಜಿಲ್ಲೆಯ ಕವಿ-ಕಾವ್ಯ ಪರಂಪರೆ-ಸAಪಾದಕರು: ಪ್ರಧಾನ ಸಂಪಾದಕರು- ವೀರಭದ್ರ ಸಿಂಪಿ ನೆಲೋಗಿ, ಕಲಬುರ್ಗಿ ಜಿಲ್ಲಾ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ – ಸಂಪಾದಕರು:  ಪ್ರಧಾನ ಸಂಪಾದಕರು-ವೀರಭದ್ರ ಸಿಂಪಿ ನೆಲೋಗಿ, ಸಂಪಾದಕರು: ಡಾ ಇಂದುಮತಿ ಪಾಟೀಲ, ಸಹ ಸಂಪಾದಕರು- ಡಾ ಎಂ.ಎಸï. ಸಿರವಾಳ- ಈ ಗಣ್ಯ ಕೃತಿಗಳನ್ನು ಆಸಕ್ತರು ಗಮನಿಸಬಹುದು). ಇಂಥ ಕಲ್ಬುರ್ಗಿಯಲ್ಲಿ ಆರಂಭದ ನಾಲಕ್ಕು ಶತಮಾನಗಳ ನಂತರ, ಆರುನೂರು ವರ್ಷಗಳ ಮುಸ್ಲಿಮï ಆಳ್ವಿಕೆಯ ಪರಿಣಾಮವಾಗಿ (ಬಹಮನಿ ಸುಲ್ತಾನರು, ಆನಂತರ ಬಿಜಾಪುರದ ಆದಿಲ್ಶಾಹಿಗಳು, ಮುಂದೆ ಹÉÊದ್ರಾಬಾದಿನ ನಿಜಾಮರ ಆಳ್ವಿಕೆಗೆ ಈ ಪ್ರಾಂತ್ಯವು ಒಳಪಟ್ಟಿತ್ತು)  ಉರ್ದು ಭಾಷೆಯು ಮಾಧ್ಯಮವಾಗಿದ್ದ ಕಾರಣ ಕನ್ನಡ ಸಂಪೂರ್ಣವಾಗಿ ಕಡೆಗಣಿತವಾಗಿತ್ತು. ಕಲಬುರ್ಗಿ (ಕಲ್ಲು ಬರಗ-ಬರಗ ಒಂದು ಧಾನ್ಯ ವಿಶÉÃಷ) ಗುಲ್ಬರ್ಗ(ಗುಲï ಬರ್ಗ-ಹೂ ಎಲೆ- ಎಂದು ಪರ್ಶಿಯನ್ ಭಾಷೆಯ ನಿಷ್ಪತ್ತಿಯ ಅರ್ಥಾಂತರಕ್ಕೆ ಒಪ್ಪಿಸಿಕÉÆಂಡಿದ್ದು ಭಾಷೆಯ ವÉÊಪರೀತ್ಯದ ಪರಿಣಾಮವÉÃ ಸರಿ). ಕಲ್ಬುರ್ಗಿ ಜಿಲ್ಲೆಯ ವಿಮೋಚನೆಗಾಗಿ ವಿಮೋಚನಾ ಚಳುವಳಿಯ ನಾಯಕರು ನಡೆಸಿದ ಹÉÆÃರಾಟವನ್ನೂ ನಾವು ಕೃತಜ್ಞತೆಯಿಂದ ನೆನೆಯಬೇಕಾಗಿದೆ. ಇಂಥ ಕಲಬುರ್ಗಿಯಲ್ಲಿ ೧೮೮೮ರ ವರೆಗೆ ಮಕ್ಕಳಿಗೆ ಮಾತೃ ಭಾಷೆಯಾದ ಕನ್ನಡದಲ್ಲಿ ಶಾಲೆಗಳÉÃ ಇರಲಿಲ್ಲ.  ಕನ್ನಡ ಮಕ್ಕಳೂ ಆಗ ಓದುತ್ತಿದ್ದುದು ಉರ್ದು ಅಥವಾ ಮರಾಠಿ ಮಾಧ್ಯಮದಲ್ಲಿ. ಹÉÊದ್ರಾಬಾದ್ ಕರ್ನಾಟಕ ಕರ್ನಾಟಕದಲ್ಲಿ ೧೯೪೮ರಲ್ಲಿ ಏಕೀಕರಣಗÉÆಂಡ ಮೇಲೆ ಕನ್ನಡದ ಉಳಿವಿಗಾಗಿ ದÉÆಡ್ಡ ಹÉÆÃರಾಟವÉÃ ನಡೆದಿದೆ. ಕಲ್ಯಾಣ ಕರ್ನಾಟಕದಲ್ಲಿ ಮಾತೃಭಾಷೆಯಾದ ಕನ್ನಡವನ್ನು ಉಳಿಸಿ ಬೆಳೆಸಿದ ಮಹನೀಯರನ್ನು ನಾವಿಂದು ಕೃತಜ್ಞತೆಯಿಂದ ಸ್ಮರಿಸಬೇಕಾಗಿದೆ. ಪೂಜ್ಯ ದÉÆಡ್ಡಪ್ಪ ಅಪ್ಪ, ಬಿ.ಬಿ.ಚಿಮ್ಮಲಗಿ, ನರಸಿಂಹರಾವು, ಕಪಟರಾಳ ಕೃಷ್ಣರಾವ್, ಭೀಮಸÉÃನ ರಾವ್ ತವರ್, ಪೂಜ್ಯ ಬಾಲ ಪಟ್ಟದÉÃವರು, ರಾಘವÉÃಂದ್ರಾಚಾರ್ಯ ಕುಷ್ಟಗಿ, ಅಣ್ಣಾರಾವ್ ಗಣಮುಖಿ, – ಇಂಥ ಹಿರಿಯರ ಪಟ್ಟಿ ಬಹುದÉÆಡ್ಡದು. ಪ್ರಾತಿನಿಧಿಕವಾಗಿ ಕೆಲವು ಹೆಸರುಗಳನ್ನು ಮಾತ್ರ ಇಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದಲ್ಲಿ ಗಡಿವಿವಾದಗಳು ಇನ್ನೂ ಬಗೆಹರಿದಿಲ್ಲ. ಕನ್ನಡ ಪರವಾಗಿ ಬಂದ ವರದಿಗಳು ಅನುಷ್ಠಾನಕ್ಕೆ ಬಂದಿಲ್ಲ. ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಗಡಿಶಿಬಿರಗಳು ಪ್ರಜಾಪ್ರಭುತ್ವವಾದೀ ನೆಲೆಯಲ್ಲಿ ಮತ್ತೆ ಸ್ಥಾಪಿತವಾಗಬೇಕೇ ಎಂಬ ಅನಿಸಿಕೆ ಮನಸ್ಸಲ್ಲಿ ಮೂಡುತ್ತಾ ಇದೆ. ಗಡಿ ಪ್ರಾಂತ್ಯಗಳು ಬಹುಭಾಷಾ ಸಂಸ್ಕೃತಿಯನ್ನು ಒಪ್ಪಿಕÉÆಳ್ಳುವುದು ಅನಿವಾರ್ಯವೆನ್ನಿಸುತ್ತಾ ಇದೆ. ಆದರೆ ಯಾವ ಭಾಷೆಯೂ ಇನ್ನೊಂದು ಭಾಷೆಯನ್ನು ಅಳಿಸಿಹಾಕಲು ಯತ್ನಿಸಬಾರದು. ಬರಗೂರು ರಾಮಚಂದ್ರಪ್ಪನವರು ತಮ್ಮ ಅಧ್ಯಕ್ಷ ಭಾಷಣದಲ್ಲಿ ಹÉÃಳಿರುವಂತೆ ಗಡಿಗ್ರಾಮ ಮನ್ನಣೆ ದÉÆರೆಯದ ಕನ್ನಡಿಗರು ನೆಲೆಸಿರುವ ಗ್ರಾಮಗಳಿಗೆ ತುರ್ತಾಗಿ ಗಡಿಗ್ರಾಮ ಮನ್ನಣೆ ದÉÆರಕಬೇಕು. ಅವರು ಕನ್ನಡ ಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಬಾರದು. ಬಹುಭಾಷಾ ಸಂಸ್ಕೃತಿಯು ಯಾವಾಗಲೂ ಉಪಾಧÉÃಯವಾದುದೆ. ಭಾಷೆಯನ್ನೂ ಆ ಮೂಲಕ ಸಮುದಾಯಗಳನ್ನು ಒಳಗÉÆಳ್ಳುವುದಕ್ಕೆ ನಮಗÉÆದಗಿದ ಸದವಕಾಶವೆಂದÉÃ ಬಹುಭಾಷಾ ಸಂಸ್ಕೃತಿಯನ್ನು ನಾವು ಮಾನ್ಯ ಮಾಡಬೇಕು. ಅದರಲ್ಲೇ ಅಖಂಡ ಭಾರತದ ಹಿತವಿದೆ. ಬಹುತ್ವವನ್ನು ಮನ್ನಿಸುವ ಏಕೀಕರಣ ನಮ್ಮ ಈವತ್ತಿನ ಅಗತ್ಯ. ಬಹುಳ ಸಂಸ್ಕೃತಿಯನ್ನು ನಾವು ಪÉÆÃಷಿಸದೆ ಹÉÆÃದರೆ ಮುಂದಿನ ಪೀಳಿಗೆ ದÉÆಡ್ಡ ನಷ್ಟವನ್ನು ಅನುಭವಿಸುವುದು. ತಾಳುವಿಕೆಯೇ ತಪವಾದ ಕನ್ನಡಿಗರಿಗೆ ಸÉÊರಣೆಯನ್ನು ಬೋಧಿಸಬೇಕಾದ್ದಿಲ್ಲ.  ಅತಿ ಸÉÊರಣೆ ಆತ್ಮನಾಶಕ್ಕೆ ಎಡೆಗÉÆಡಬಹುದೆಂಬ ಎಚ್ಚರಿಕೆ ಮಾತನ್ನು ಮಾತ್ರ ಹÉÃಳಬೇಕಾಗಿದೆ.  ಒಂದು ಕಡೆ ವಲಸೆಗೆ ಅನುಮತಿ, ಇನ್ನೊಂದು ಕಡೆ ಭಾಷಾವಾರು ಪ್ರಾಂತ್ಯಗಳ ರಚನೆ ಈ ಎರಡು ಆಳದಲ್ಲಿ ವಿರುದ್ಧಮುಖೀ ನಿಲುವುಗಳಾಗಿವೆ. ಈ ಬಗ್ಗೆ ಆಳವಾದ ಚಿಂತನೆ ಮತ್ತು ಹÉÆಸ ಸರ್ವಹಿತಕಾರೀ ನಿಲುವುಗಳು ಅಗತ್ಯವಾಗಿವೆ. ಪ್ರಾಂತ್ಯ ಪ್ರಾಂತ್ಯಗಳ ನಡುವಿನ ಸಂಬAಧ(ನದಿ ಗಡಿ ಶಿಕ್ಷಣ ಮಾಧ್ಯಮ ಸಮಸ್ಯೆ), ಪ್ರಾಂತ್ಯ ಕÉÃಂದ್ರ ಸರಕಾರಗಳ ಸಂಬAಧ ಮರುವ್ಯಾಖ್ಯೆಯ ಮೂಲಕ ವಿವÉÃಚನೆಗೆ ಒಳಗಾಗಬೇಕು.  ಕುವೆಂಪು ಅವರು ಕÉÃಂದ್ರ ಮತ್ತು ಪ್ರಾಂತ್ಯ ಸಂಬAಧವನ್ನು ತಾಯಿ ಮಕ್ಕಳ ಸಂಬAಧವಾಗಿ ಪರ್ಯಾಲೋಚಿಸಿ ಅವುಗಳ ನಡುವಿನ ಬಿಕ್ಕಟ್ಟನ್ನು ಪರಿಹರಿಸುವ ಹೃದಯದ ಹಾದಿಯನ್ನು ತಮ್ಮ ಕವಿತೆಯಲ್ಲಿ ಪ್ರಮೀಕರಿಸಿದ್ದಾರೆ. ಬೇಂದ್ರೆಯವರು ಪ್ರಾಂತ್ಯ ಪ್ರಾಂತ್ಯಗಳ ನಡುವೆ ಸÉÆÃದರ ಸಂಬAಧವನ್ನು ಕಲ್ಪಿಸಿ ಪ್ರಾಂತ್ಯ ಪ್ರಾಂತ್ಯಗಳ ಸಂಬAಧದ ವಿಷಮತೆಯನ್ನು ಪರಿಹರಿಸಿಕÉÆಳ್ಳುವ ಉಪಾಯ ಸೂಚಿಸಿದ್ದಾರೆ. ಭಾವನೆಯ ನೆಲೆಯಲ್ಲಿ ಇವು ಮಹತ್ವದ ಕಲ್ಪನೆಗಳು. ಆದರೆ ವಾಸ್ತವ ಸತ್ಯ ಆದರ್ಶದ ಮಾತುಗಳನ್ನು ಯಾವಾಗಲೂ ತಿರಸ್ಕರಿಸುತ್ತಾ ಬರುತ್ತಿದೆ. ಕÉÃಂದ್ರ ಪ್ರಾಂತ್ಯಗಳ ಸಂಬAಧವನ್ನು ಕುರಿತು ಮಾತಾಡುವಾಗ ನಾವು ಬಯಸುವುದು ಸ್ವಾಯತ್ತೆಯನ್ನೇ ಹÉÆರತು ಪಾರತಂತ್ರö್ಯವನ್ನಲ್ಲ ಎಂದು ತಮ್ಮ ಅಧ್ಯಕ್ಷಭಾಷಣದಲ್ಲಿ ಪುತಿನ ಸ್ಪಷ್ಟವಾಗಿ ಹÉÃಳಿದ್ದಾರೆ. ಹಾಗಾಗದೆ ಹÉÆÃದಲ್ಲಿ ರಾಜಾಜಿಯವರು ಬಹುಹಿಂದೆಯೇ ಸೂಚಿಸಿದಂತೆ ರಾಜ್ಯ ಸರಕಾರಗಳು ಕÉÃಂದ್ರ ವ್ಯವಸ್ಥೆಯ ಹಿಡಿತದಲ್ಲಿ ನಲುಗುವ ವಿಜೃಂಭಿತ ಕಾರ್ಪೊರÉÃಷನ್‌ಗಳು  ಆಗಿಬಿಡಬಹುದು. ಕÉÃಂದ್ರದ ನಿಯಂತ್ರಣ ಪ್ರಾಂತ್ಯಗಳನ್ನು ಚದುರಿಹÉÆÃಗದಂತೆ ಒಗ್ಗೂಡಿಸುವಲ್ಲಿ ಅಗತ್ಯ. ಬಳ್ಳಿಯಲ್ಲಿ ಪ್ರತಿಯೊಂದು ಹೂವೂ ತನ್ನಷ್ಟಕ್ಕೆ ಸಂಪೂರ್ಣವಾಗಿ ಅರಳುವಂತೆ ಪ್ರಾಂತ್ಯಗಳು ಸ್ವಾಯತ್ತತೆಯನ್ನು ಸಾಧಿಸುವುದು ಅತ್ಯಗತ್ಯ. ದÉÃಹದ ಯಾವ ಭಾಗ ದುರ್ಬಲವಾದರೂ ದÉÃಹಿ  ವಿಕಲಾಂಗಿಯೇ. ಸಮುದ್ರವನ್ನು ಸÉÃರಿದ ಮೇಲೂ ತಮ್ಮ ಪಾಡಿಗೆ ತಾವು ಹರಿಯುವ ನದಿಗಳ ಸ್ವಾತಂತ್ರö್ಯ, ಕÉÃಂದ್ರ ಪ್ರಾಂತ್ಯ ಸಂಬAಧವನ್ನು ಆದರ್ಶದ ನೆಲೆಯಲ್ಲಿ ಹಿಡಿಯಬಹುದಾದ ಅದ್ಭುತ ರೂಪಕ.

ವಾಸ್ತವ ಮತ್ತು ಆದರ್ಶಗಳ ಸಂಘರ್ಷದ ಪ್ರಸ್ತಾಪ ಮಾಡುವಾಗ ನನಗೆ ಬದುಕು ಮತ್ತು ಕಲೆಯ ನಡುವಿನ ಈವತ್ತಿನ ವಿಷಮ ನೆಲೆಯೂ ಕಾಡುವುದು. ನಮ್ಮ ಬಹುಪಾಲು ಜನ ನÉÆÃಡುತ್ತಿರುವ ಓದುತ್ತಿರುವ ಮಾಡುತ್ತಿರುವ ವಿಭಿನ್ನ ಕಲಾಪ್ರಕಾರಗಳು ಈಗ ಆತ್ಮಾಭಿವ್ಯಕ್ತಿಗಿಂತ, ಸಾಮಾಜಿಕ ಬದ್ಧತೆಗಿಂತ ಹೆಚ್ಚಾಗಿ ಹಣಮಾಡುವ ಉದ್ಯಮಗಳಾಗುತ್ತಿವೆಯೆಂಬ ಕಠÉÆÃರ ಸತ್ಯ ಎದೆಗೆಡಿಸುವಂತಿದೆ.  ಬದುಕಿನಿಂದ ಬಹು ದೂರವಿದ್ದು ಭ್ರಮೆಗಳನ್ನು ಬಿತ್ತುವ ಕಲಾಮಾಧ್ಯಮಗಳÉÃ ಈವತ್ತು ವಿಜೃಂಭಿಸುತ್ತಿರುವುದು. ಕನ್ನಡ ಕಲೆ ಕನ್ನಡ ಜೀವನದ ದಿಗ್ದರ್ಶಿಯಾಗಬೇಕು. ಈವತ್ತಿನ ವ್ಯಾಪಾರಿ ಕಲಾಮಾಧ್ಯಮಗಳು ಆ ಜವಾಬುದಾರಿಯನ್ನು ನಿರ್ವಹಿಸುತ್ತಿವೆಯೇ? ಬಿ.ವಿ.ಕಾರಂತ, ಗಿರೀಶ ಕಾಸರವಳ್ಳಿ ಈಗ ಬಹುಜನದ ಆಯ್ಕೆಯಲ್ಲ. ಕರ್ನಾಟಕದಲ್ಲಿ ಕಲೆಯು ಕನ್ನಡ ಸಂಸ್ಕೃತಿಯ ಅಭಿವ್ಯಕ್ತಿಯಾಗಬೇಕು; ಅಗ್ಗದ ಮನರಂಜನೆಯ ಸಾಧನವಲ್ಲ ಎಂದು ನಂಬುವ ಗಂಭೀರ ಕಲಾಚಿಂತನೆಯ ಹತ್ತಾರು ಕಲಾತ್ಮಕ ಚಿತ್ರಗಳು ಕನ್ನಡದಲ್ಲಿ ಈಗಲೂ ನಿರ್ಮಾಣಗÉÆಳ್ಳುತ್ತಿವೆ. ಈಗ ಹÉÆಸ ಹÉÆಸ ನಿರ್ದೇಶಕರು ಈ ನಿರ್ಮಾಣಗಳ ಮುಂಚೂಣಿಯಲ್ಲಿದ್ದಾರೆ. ಈ ಚಿತ್ರಗಳ ಬಿಡುಗಡೆಗಾಗಿ ಪ್ರತಿ ಜಿಲ್ಲೆಯಲ್ಲೂ ಕಿರು ಚಿತ್ರಮಂದಿರಗಳನ್ನು ನಿರ್ಮಿಸುವುದು ನಮ್ಮ ಸರ್ಕಾರದ ಬಹು ದÉÆಡ್ಡ ಹÉÆಣೆಗಾರಿಕೆ.  ಬೆಂಗಳೂರಿನಲ್ಲೇ ಇದ್ದ ಪುಟ್ಟಣ್ಣ ಕಣಗಾಲï ಚಿತ್ರಮಂದಿರ ಅಂಥ ಉದ್ದೇಶಕ್ಕಾಗಿ ಮತ್ತೆ ಚಾಲೂ ಆಗಬೇಕು.. ಭ್ರಮೆಗಳನ್ನು ಬಿತ್ತುವ ಕ್ರËರ್ಯವನ್ನು ವಿಜೃಂಭಿಸುವ ಭಾರತ ಬಯಸುವ ನಾಯಕತ್ವ ಎಂಥದೆAದು ಗ್ರಹಿಸಲು ವಿಫಲವಾಗುತ್ತಿರುವ ಕಲಾವ್ಯಾಪಾರವು ಈವತ್ತು ನಮ್ಮನ್ನು ಆಕರ್ಷಿಸುತ್ತಿರುವ ಸರಕು. ಅವು ತÉÆÃರಿಸುವ ಕಣ್ಕುಕ್ಕುವ ವÉÊಭವ, ಕಲಾಕಾರರ ಉಡುಪು ಕುಣಿತ ಹಾಡು ಯಾವುದೂ ಕನ್ನಡದ ಆತ್ಮವನ್ನು ಪ್ರತಿಬಿಂಬಿಸದಾಗಿದೆ. ಕಲೆ ಕÉÃವಲ ಮನರಂಜನೆಯ ಬಾಬತ್ತೋ? ಹಣ ಹೂಡಿ ಹಣ ಬೆಳೆಯುವ ವ್ಯಾಪಾರÉÆÃದ್ಯಮವÉÇÃ ಈ ಬಗ್ಗೆ ನಮ್ಮ ಕಲಾಪ್ರಬುದ್ಧರು ಮರುಚಿಂತನೆ ನಡೆಸಬೇಕಾಗಿದೆ. ಕಲಾತ್ಮಕ ಎಚ್ಚರ, ಸಹಜವಾದ ಆತ್ಮಾಭಿವ್ಯಕ್ತಿ ಇದ್ದೂ ಜನಪ್ರೀತಿಗಳಿಸುವುದು ಈವತ್ತಿನ ತುರ್ತು ಅಗತ್ಯ. ಪುಟ್ಟಣ್ಣ ಕಣಗಾಲï, ಎನï.ಲಕ್ಷಿö್ಮÃನಾರಾಯಣರಂಥವರು ಇಂಥ ಹÉÆಸದಾರಿಗೆ ತೂರುದೀಪವಾಗಬಲ್ಲರು. ಸಾಹಿತ್ಯದಲ್ಲೂ ಅಷ್ಟೆ. ಪಂಪನದ್ದು ಘನವಾದ ಕಾವ್ಯ. ಕುಮಾರವ್ಯಾಸ ವಚನಕಾರರು ದಾಸರು ಘನವಾದದ್ದನ್ನು ಜನ ತಣಿಯುವಂತೆ ಒಪ್ಪಿಸುವ ದÉÃಸೀ ಮಾರ್ಗ. ಇವೆರಡನ್ನೂ ಬಿಟ್ಟು ಕಲೆ ಮಾರಾಟದ ಸರಕಾಗುವುದು, ಹಣ ಬೆಳೆಯುವ ಹುನ್ನಾರವಾಗುವುದು ಕನ್ನಡ ಸಂಸ್ಕೃತಿಗೆ ಮಾರಕ.

ನಮ್ಮ ನವಯುಗದ ನಾಯಕರು ಯಾರು ಎಂಬುದನ್ನು ನಾವು ಗುರುತಿಸಿಕÉÆಳ್ಳಬೇಕಾದುದು  ಈವತ್ತಿನ  ಮೊದಲ ಅಗತ್ಯ; ನಾಯಕತ್ವದ ಹÉÆಣೆ ಅರಿತು ಜೀವನದ ವಿಭಿನ್ನ ಕಾರ್ಯಕ್ಷೇತ್ರಗಳಲ್ಲಿ ನಾಯಕರಾಗಿ ನಿಲ್ಲುವುದು ಎರಡನೆಯ ಗುರುತರ ಜವಾಬುದಾರಿ. ರಾಜಕೀಯ ನಾಯಕರಿರುವಂತೆ ರÉÊತ ನಾಯಕರು, ಯೋಧ ನಾಯಕರು, ಉದ್ಯಮಿ ನಾಯಕರು, ಸಿನಿಮಾ ನಾಯಕರು, ಕ್ರೀಡಾ ನಾಯಕರು, ಭಾಷಾಸಂಸ್ಕೃತಿ ನಾಯಕರ ಪಡೆ  ನಿರ್ಮಾಣಗÉÆಳ್ಳಬೇಕಾಗಿದೆ. ನಾಯಕತ್ವ ಎಂಬುದು ವ್ಯಕ್ತಿತ್ವದ ವಿಜೃಂಭಣೆಯಲ್ಲ. ಪರಹಿತ ಸಾಧನೆಯ ಗುರುತರವಾದ ಜವಾಬುದಾರಿ. ಅಂಥ ನಾಯಕರು ದÉÃಶದ ಘನತೆಯನ್ನು ಕಾಯಬಲ್ಲವರಾಗುತ್ತಾರೆ. ಅಂಥ ನಾಯಕರು ತಮ್ಮ ತಮ್ಮ ಭಾಷಾ ಮತ್ತು ಅಸ್ಮಿತೆಯ ರಕ್ಷಣೆಯಲ್ಲೂ ತÉÆಡಗುವರು. ಡಾ. ರಾಜಕುಮಾರï ಅಂಥವರು ನಮ್ಮ ಹÉÆಸ ಕಲಾವಿದರಿಗೆ ಆದರ್ಶವಾಗಬೇಕು. ಸರಳ ಉದಾಹರಣೆ ಮೂಲಕ ನನ್ನ ವಿಚಾರವನ್ನು ವಿವರಿಸುತ್ತೇನೆ: ಕ್ರಿಕೆಟ್ ಕಲಿಯೊಬ್ಬ ವಿಕೆಟ್ಟುಗಳ ರಕ್ಷಣೆ ಮಾಡಿಕÉÆಂಡರೆ ಸಾಲದು.  ತನ್ನ ನಡೆ-ನುಡಿ, ಚಾರಿತ್ರö್ಯ ಸಂಗಡಿಗರ ಸ್ವಾಭಿಮಾನ ರಕ್ಷಣೆ, ಒಟ್ಟು ಪಂಗಡದ ನ್ಯಾಯಶೀಲ ತÉÆಡಗುವಿಕೆ-ಎಲ್ಲದರಲ್ಲೂ ತನ್ನ ನಾಯಕತ್ವವನ್ನು ಮೆರೆಯಬೇಕಾಗಿದೆ. ಗೆಲ್ಲುವುದÉÃ ಆಟದ ಗುರಿಯಲ್ಲ. ನೂರಕ್ಕೆ ನೂರು ಮನಸ್ಸು ಹಾಕಿ ಪ್ರಾಮಾಣಿಕವಾಗಿ ಕ್ರೀಡಾಧರ್ಮಕ್ಕೆ ಲೋಪವಾಗದಂತೆ ಆಡುವುದÉÃ ಕ್ರೀಡಾನಾಯಕನ ಗುರಿ. ಈ ಮಾತು ಸಾಹಿತ್ಯ, ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹೀಗೆ ಎಲ್ಲ ಕ್ಷೇತ್ರಗಳಿಗೂ ಅನ್ವಯಿಸುವಂಥದ್ದು.

ನಾನು ಕನ್ನಡವನ್ನು ಬದುಕುವುದಕ್ಕಿಂತ ನಮ್ಮ ಜನಪ್ರಿಯ ಚಲನಚಿತ್ರ ನಾಯಕ, ನಾಯಕಿ, ಕ್ರೀಡಾ ಪಟು, ಚಿತ್ರಶಿಲ್ಪಿ, ಸಂಗೀತಜ್ಞ ಕನ್ನಡವನ್ನು ಬದುಕುವುದು ಸಮುದಾಯದ ಆತ್ಮಾಭಿಮಾನವನ್ನು ತಕ್ಷಣವÉà ಊರ್ಜಿತಗÉÆಳಿಸಬಲ್ಲುದು. ಕ್ರಿಕೆಟï ಮೈದಾನದಲ್ಲಿ ನಮ್ಮ ಅನಿಲ್ ಕುಂಬ್ಳೆಯೋ, ರಾಹುಲï ದ್ರಾವಿಡ್ಡೋ ಕನ್ನಡದಲ್ಲಿ ಕೆಲವು ತುಂಡು ಮಾತು ಹÉÃಳಿದಾಗಲೂ ನಮ್ಮ ಹುಡುಗರು ಸಡಗರಪಟ್ಟಿದ್ದು ರÉÆÃಮಾಂಚಿತರಾಗಿದ್ದು ನಾನು ಬಲ್ಲೆ! ಜೀವನದ ಎಲ್ಲ ರಂಗದ ನಾಯಕರೂ ಕನ್ನಡವನ್ನು ಜೀವಿಸಬೇಕೆಂಬುದು ನನ್ನ ಆಗ್ರಹ ಪೂರ್ವಕ ಮನವಿ. ಕನ್ನಡ ಪತ್ರಿಕೆ ಓದುವ, ಕನ್ನಡ ನಾಟಕ ಸಿನಿಮಾ ನÉÆÃಡುವ, ಕನ್ನಡ ಭಾವಗೀತೆ ಹಾಡುವ, ಕನ್ನಡದಲ್ಲಿ ಮಾತಾಡುವ ನಿತ್ಯೋತ್ಸವ ಕನ್ನಡವನ್ನು ಯಾವತ್ತೂ ಬೆಳಗುವ ದೀಪವಾಗಿ ಉಳಿಸಬಲ್ಲುದು. ಇಲ್ಲಿ ಕನ್ನಡ ಹವ್ಯಾಸಿ ರಂಗಭೂಮಿ, ಮತ್ತು ಸುಗಮ ಸಂಗೀತ ರಂಗದ ಬಗ್ಗೆ ಪ್ರಶಂಸೆಯ ಮಾತÉÆಂದನ್ನು ಹÉÃಳಲೇ ಬೇಕು. ಕರ್ನಾಟಕದಲ್ಲಿ ರಂಗಶಿಕ್ಷಣ ಕÉÆಡುವ ಹತ್ತಾರು ಶಿಕ್ಷಣ ಸಂಸ್ಥೆಗಳಿವೆ.  ಭಾವಗೀತೆ ಕಲಿಸುವ ನೂರಾರು ಸುಗಮ ಸಂಗೀತ ಶಾಲೆಗಳಿವೆ. ಸಾವಿರಾರು ಮಕ್ಕಳು, ತರುಣರು ಇಂಥ ಶಾಲೆಗಳಲ್ಲಿ ಸ್ವ-ಇಚ್ಛೆಯಿಂದ ಕಲಿಯುತ್ತಿದ್ದಾರೆ. ಈ ಶಾಲೆಗಳಲ್ಲಿ ಶಿಕ್ಷಣ ಮಾಧ್ಯಮ ಕÉÃವಲ ಕನ್ನಡ ಮಾತ್ರ! ಇದು ನಾವೆಲ್ಲಾ ಹೆಮ್ಮೆ ಪಡಬೇಕಾದ ಸಂಗತಿ. ಒತ್ತಾಯವಿಲ್ಲದೆ ಈ ಶಾಲೆಗಳಲ್ಲಿ ಕನ್ನಡ ಶಿಕ್ಷಣ ಮಾಧ್ಯಮವಾಗಿ ಚಾಲ್ತಿಯಲ್ಲಿದೆ. ಇನ್ನು ರಂಗÉÆÃತ್ಸವಗಳು ಬೆಂಗಳೂರು, ಮೈಸೂರು, ಧಾರವಾಡ, ಕಲಬುರ್ಗಿ, ಹೆಗ್ಗೋಡು, ಸಿರಿಗೆರೆ, ಸಾಣೇಹಳ್ಳಿ, ಮಲ್ಲಾಡಿಹಳ್ಳಿ, ಮಂಗಳೂರು, ದಾವಣಗೆರೆ ಹೀಗೆ ಕರ್ನಾಟಕದ ನಾನಾ ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಾ ಇವೆ.  ಕನ್ನಡ ಕವಿಗಳ ಭಾವಗೀತೆಗಳ ಗಾಯನದ ಹಬ್ಬಗಳು ಬೇರೆ ಬೇರೆ ಸ್ಥಳಗಳಲ್ಲಿ ನಡೆಯುತ್ತಾ ಇವೆ. ಕನ್ನಡ ಸಾಹಿತ್ಯ ಸಮ್ಮೇಳನದ ವÉÊಭವವನ್ನು ನೆನಪಿಸುವಂಥ ಸಂಭ್ರಮದ ಸುಗಮ ಸಂಗೀತ ಸಮ್ಮೇಳನಗಳು ವÉÊ.ಕೆ.ಮುದ್ದುಕೃಷ್ಣರ ನÉÃತೃತ್ವದಲ್ಲಿ ಪ್ರತಿವರ್ಷವೂ ನಡೆಯುತ್ತಾ ಇವೆ. ಉಪಾಸನ, ಗಾಯನಗಂಗಾ, ಸಾಧನಾ ಮ್ಯೂಜಿಕ್ ಸ್ಕೂಲ್, ಸಂಗೀತ ಗಂಗಾ, ಆದರ್ಶ, ಸರಸ್ವತಿ, ಹೊಂಬಾಳೆ, ಸೃಜನ ಸಂಗೀತ ಶಾಲೆ, ಸಂಗೀತ ಧಾಮ, ಸುಗಮ ಸಂಗೀತ ಒಕ್ಕೂಟ – ಮೊದಲಾದ ಸಂಸ್ಥೆಗಳಿಗೆ ಭಾವಗೀತಾ ಉತ್ಸವ ನಿತ್ಯೋತ್ಸವದ ವಿದ್ಯಮಾನ. ಬೇಂದ್ರೆ, ಕುವೆಂಪು, ಕೆ.ಎಸ್.ನ ಅವರಂಥ ಕನ್ನಡದ ಮಹÉÆÃನ್ನತ ಕಾವ್ಯ ದನಿಗಳನ್ನು ಕನ್ನಡ ಜನಸಮುದಾಯದ ಹೃದಯದಲ್ಲಿ ಬಿತ್ತುವಲ್ಲಿ ನಮ್ಮ ಸುಗಮ ಸಂಗೀತ ಕಲಾವಿದರು ಶ್ಲಾಘ್ಯ ಕೆಲಸ ಮಾಡುತ್ತಿರುವರು. ಇನ್ನು ರಂಗ ಪಠ್ಯಗಳನ್ನು ನಮ್ಮ ಹÉÆಸ ಜನಾಂಗ ಎಷ್ಟರ ಮಟ್ಟಿಗೆ ಅಧ್ಯಯನ ಮಾಡುವುದÉÆà ತಿಳಿಯದು. ನಮ್ಮ ರಂಗಮAದಿರಗಳAತೂ ಪ್ರತಿ ನಿತ್ಯವೂ ಕಾರ್ನಾಡ, ಕಂಬಾರ, ಶ್ರೀರಂಗ, ಕÉÊಲಾಸಂ ಮೊದಲಾದ ನಾಟಕಕಾರರ ಕೃತಿಗಳನ್ನು ರಂಗಸ್ಥಲದಲ್ಲಿ ಪ್ರತ್ಯಕ್ಷೀಕರಿಸುವ ಘನವಾದ ಕಾರ್ಯದಲ್ಲಿ ತÉÆಡಗಿವೆ.  ಕನ್ನಡದ ಮುಖ್ಯ ಕೃತಿಗಳ ಡಿಜಟಲೀಕರಣ ನಿರಂತರವಾಗಿ ಸಾಗುತ್ತಾ ಇದೆ. ಮಾಸ್ ಮೀಡಿಯಾಗಳನ್ನು ಸಾರ್ಥಕವಾಗಿ ಕನ್ನಡದ ಅಭಿವೃದ್ಧಿಗೆ ಬಳಸಿಕÉÆಳ್ಳುವ ಕೆಲಸವೂ ನಡೆಯುತ್ತಾ ಇದೆ. ಕರ್ನಾಟಕದ ಹÉÆರಗೆ ಬೇರೆ ಬೇರೆ ಪ್ರಾಂತ್ಯಗಳಲ್ಲಿ ಕನ್ನಡ ಶಾಲೆಗಳು ಇನ್ನೂ ಕಾರ್ಯಪ್ರವೃತ್ತವಾಗಿಯೇ ಇವೆ. ಕೆಲವು ಕಡೆ ಕನ್ನಡ  ಸ್ನಾತಕÉÆÃತ್ತರ ಅಭ್ಯಾಸ ಕೂಡ ನಡೆಯುತ್ತಾ ಇದೆ. ಕರ್ನಾಟಕ ಮತ್ತು ಭಾರತದ ವಿಷಯ ಹಾಗಿರಲಿ, ಅಮೆರಿಕಾ, ಇಂಗ್ಲೆAಡ್, ಸಿಂಗಪೂರ್, ಆಸ್ಟೆçÃಲಿಯ, ದುಬಾಯï, ಕತಾರ್, ಬೆಹರÉÃನ್ ಮೊದಲಾದ ಹÉÆರ ದÉÃಶಗಳಲ್ಲೂ ಕನ್ನಡವನ್ನು ಮಕ್ಕಳಿಗೆ ಕಲಿಸುವ ವ್ಯವಸ್ಥೆಯಿದೆ. ಬೇರೆ ಬೇರೆ ದÉÃಶಗಳ ಕನ್ನಡ ಸಂಘಗಳು ಪ್ರತಿವರ್ಷವೂ ಕನ್ನಡ ಲೇಖಕರನ್ನು ಬರಮಾಡಿಕÉÆಳ್ಳುತ್ತಾ ಕನ್ನಡ ಶ್ರದ್ಧೆಯನ್ನು ಬತ್ತದ ತÉÆರೆಯಂತೆ ರಕ್ಷಿಸಿಕÉÆಂಡಿವೆ. ಅಮೆರಿಕಾದಲ್ಲಿ ಇಂಗ್ಲೆAಡಲ್ಲಿ ಸಾಹಿತ್ಯ ಸಮ್ಮೇಳನವೂ ನಡೆಯುತ್ತಾ ಇವೆ. ಆ ದÉÃಶಗಳಲ್ಲಿ ಸಮರ್ಥರಾದ ಲೇಖಕರೂ ಕನ್ನಡ ಸಾಹಿತ್ಯ ನಿರ್ಮಾಣದಲ್ಲಿ ತÉÆಡಗಿದ್ದಾರೆ. ಗ್ರಂಥ ಪ್ರಕಾಶನವನ್ನೂ ಕÉÊಗÉÆಂಡಿದ್ದಾರೆ. ಆ ಎಲ್ಲ ಅನಿವಾಸಿ ಕನ್ನಡಿಗರ ಮನಸ್ಸು ಈಗ ಕಲ್ಬುರ್ಗಿಯ ಸಾಹಿತ್ಯ ಸಮ್ಮೇಳನದಲ್ಲಿ ಕÉÃಂದ್ರೀಕೃತವಾಗಿದೆ ಎಂದು ನಾನು ವಿಶ್ವಾಸದಿಂದ ಹÉÃಳಬಲ್ಲೆ.

ಹÉÃಳೀ ಕÉÃಳಿ ಇದು ಸಾಹಿತ್ಯ ಸಮ್ಮೇಳನ. ಕನ್ನಡ ಪುಸ್ತಕÉÆÃದ್ಯಮ ಮತ್ತು ಸದ್ಯದ ಸಾಹಿತ್ಯ ಸಂದರ್ಭದ ಬಗ್ಗೆ ಕೆಲವು ಮಾತುಗಳನ್ನು ಹÉÃಳುವುದು ನನ್ನ ಕರ್ತವ್ಯ. ಪುಸ್ತಕ ಪ್ರಕಾಶನ ಮತ್ತು ಮುದ್ರಣದ ಗುಣಮಟ್ಟ ನಿಜಕ್ಕೂ ಸಾಹಿತ್ಯಾಭಿಮಾನಿಗಳು ಹೆಮ್ಮೆ ಪಡುವಂತಿದೆ. ಇದರಲ್ಲಿ ಎರಡು ಮಾತಿಲ್ಲ. ಪುಸ್ತಕ ಪ್ರಕಾಶನವು ದಂಡಿಯಾಗಿ ಹಣ ತರುವ ದಂಧೆಯಲ್ಲ. ಆದಾಗ್ಯು ಕÉÃವಲ ಸಾಹಿತ್ಯಪ್ರೀತಿಯಿಂದ ಹತ್ತಾರು ಪ್ರಕಾಶನ ಸಂಸ್ಥೆಗಳು ಈಗ ಪ್ರಕಟಣ ಸಾಹಸದಲ್ಲಿ ತÉÆಡಗಿಕÉÆಂಡಿವೆ. ಪ್ರತಿ ವಾರವೂ ಒಂದಲ್ಲ ಒಂದು ಪುಸ್ತಕ ಬಿಡುಗಡೆಯ ಕಾರ್ಯಕ್ರಮ ಬೆಂಗಳೂರಲ್ಲAತೂ ನಡೆಯುತ್ತಲೇ ಇರುತ್ತದೆ. ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥ ಮಾಲೆ, ನವ ಕರ್ನಾಟಕ, ಮನÉÆÃಹರ ಗ್ರಂಥಮಾಲೆ, ಸಪ್ನ ಬುಕ್ ಹËಸ್, ಅಂಕಿತ ಪುಸ್ತಕ,  ಅಭಿನವ ಪುಸ್ತಕ, ಅಕ್ಷರ ಪ್ರಕಾಶನ, ರಾಘವÉÃಂದ್ರ ಪ್ರಕಾಶನ, ಮುಂತಾದ ಅನÉÃಕ ಪ್ರಕಟಣ ಸಂಸ್ಥೆಗಳು ಈಚಿನ ದಿನಗಳಲ್ಲಿ ನಿರಂತರವಾಗಿ ಗ್ರಂಥ ಪ್ರಕಾಶನದಲ್ಲಿ ತÉÆಡಗಿವೆ.   ಹÉÆಸ ಹÉÆಸ ಲೇಖಕರು (ಅವರು ಸಮಾಜದ ಬೇರೆಬೇರೆ ವಲಯಗಳಿಂದ ಬಂದAಥವರು! ಕÉÃವಲ ಕನ್ನಡ ಇಂಗ್ಲಿಷ್ ಅಧ್ಯಾಪಕರಲ್ಲ) ಬರವಣಿಗೆಯಲ್ಲಿ ಕ್ರಿಯಾಶೀಲವಾಗಿ ತÉÆಡಗಿಕÉÆಂಡಿದ್ದಾರೆ.  ಕನ್ನಡ ಸಾಹಿತ್ಯದಲ್ಲೀಗ ಪ್ರವಾಹರೂಪಿಯಾದ ಸಾಹಿತ್ಯ ಚಳುವಳಿಯ ಉಕ್ಕು ಕಾಣುತ್ತಿಲ್ಲವಾದರೂ ಸಮರ್ಥರಾದ, ಬೇರೆ ಬೇರೆ ಮನÉÆÃಧರ್ಮದ ಅನÉÃಕ ಹÉÆಸ ಪೀಳಿಗೆಯ ಲೇಖಕರು ಹÉÆಸ ವಸ್ತು ವಿಷಯ ಹÉÆಸ ಸಂವÉÃದನೆ ಹÉÆಸ ಆಶಯಗಳ ಕೃತಿಗಳನ್ನು ಪುಂಖಾನುಪುAಖವಾಗಿ ಪ್ರಕಟಿಸುತ್ತಾ ಇದ್ದಾರೆ. ಆತ್ಮಶÉÆÃಧಕವಾದ ಕೃತಿಗಳೂ, ಸಮಾಜಮುಖಿಯಾದ ಕೃತಿಗಳ ಹೆಗಲಿಗೆ ಹೆಗಲು ತಾಗಿಸುತ್ತಾ ಈಗ ಪೆರÉÃಡು ನಡೆಸುತ್ತಾ ಇವೆ. ಈಚಿನ ದಿನಗಳಲ್ಲಿ ನನ್ನ ಓದಿಗೆ ದÉÆರೆತ ಕೆಲವು ಪುಸ್ತಕಗಳನ್ನು ನೆನೆದರೂ ಹÉÆಸ ಜನಾಂಗದ ಕ್ರಿಯಾಶೀಲತೆಯ ಮಟ್ಟ ಮನಸ್ಸಿಗೆ ಸಮಾಧಾನ ನೀಡುವಂತಿದೆ.  ಯುವಪೀಳಿಗೆಯಲ್ಲಿ ಸಂಯುಕ್ತಾ ಪುಲಿಗಲï, ರಾಜೇಂದ್ರ ಪ್ರಸಾದ್, ಮಂಜುನಾಯಕ ಚೆಲ್ಲೂರು, ಶಶಿ ತರೀಕೆರೆ, ಕರ್ಕಿ ಕೃಷ್ಣಮೂರ್ತಿ, ಕಾವ್ಯ ಕಡಮೆ, ಎಚ್.ಎಸ್.ಅನುಪಮ, ವಿಕ್ರಮï ಹತ್ವಾರ್, ಸುಬ್ಬು ಹೊಲೆಯಾರ್,  ಟಿ. ಯಲ್ಲಪ್ಪ – ರಂಥ ಆಸೆಹುಟ್ಟಿಸುವ ಲೇಖಕರು ಕಾಣಿಸಿಕÉÆಂಡಿದ್ದಾರೆ. ಈ ಸಾಲಿಗೆ ಸÉÃರಬೇಕಾದ ನನ್ನ ಕಣ್ತಪ್ಪಿ ಹÉÆÃದ ಇನ್ನೂ ಅನÉÃಕ ಮಂದಿ ಇರಲಿಕ್ಕೆ ಸಾಧ್ಯ. ಕಥೆ ಕಾದಂಬರಿ ಕ್ಷೇತ್ರಗಳಲ್ಲಿಯಂತೂ ನಮ್ಮ ಸಾಹಿತ್ಯದ ಬೆಳೆ ಹುಲುಸಾಗಿದೆ. ನಿರಂತರವಾಗಿ ಬೃಹತ್ ಗಾತ್ರದ ಕಾದಂಬರಿಗಳು ಪ್ರಕಟವಾಗುತ್ತಲೇ ಇವೆ. ಇದÉà ಬಗೆಯ ಮಹತ್ವಾಕಾಂಕ್ಷೆ ಅನುವಾದ ಕೃತಿಗಳಲ್ಲೂ ಕಂಡುಬರುತ್ತಿದೆ. ಕಳೆದ ಒಂದೆರಡು ವರ್ಷಗಳನ್ನು ನೆನೆದರೂ ಅದೆಂಥ ಹೆಮ್ಮೆ ಪಡುವ ಸಾಹಿತ್ಯ ಕೃಷಿಯನ್ನು ನಾವು ಕಂಡಿದ್ದೇವೆ! ಬಂಡಾಯ ದಲಿತ ಮುಸ್ಲಿಮï-ಸಂವÉÃದನೆ, ಸ್ತಿçà ಸಂವÉÃದನೆಯ ಬೆಲೆಬಾಳುವ ಸಾಹಿತ್ಯ ಮಾಲೆ ಈಚಿನ ವರ್ಷಗಳಲ್ಲಿ ಪ್ರಕಟಗÉÆಂಡಿವೆ. ಈಗಾಗಲೇ ಹೆಸರು ಮಾಡಿರುವ ಲೇಖಕರ ಈಚಿನ ಕೃತಿ ಸಂಪದವು ಕೂಡ ಅಭಿಮಾನ ಮೂಡಿಸುವಂತಿದೆ. ಪುರುಷÉÆÃತ್ತಮ ಬಿಳಿಮಲೆಯವರ ಕನ್ನಡ ಕಥನಗಳು, ಡಿ.ಎಸ್. ನಾಗಭೂಷಣ ಅವರ ಗಾಂಧಿಕಥನ, ಷ. ಶೆಟ್ಟರ್ ಅವರ ರೂವಾರಿ, ಕೆ.ವಿ.ಅಕ್ಷರ ಅವರ ಶಂಕರ ವಿಹಾರ, ರಹಮತ್ ತರೀಕೆರೆಯವರ ಹಿತ್ತಲ ಜಗತ್ತು, ನರಹಳ್ಳಿ ಅವರ ಬಾ ಕುವೆಂಪು ದರ್ಶನಕ್ಕೆ ವಸುಧೇಂದ್ರ ಅವರ ತೇಜೋ ತುಂಗಭದ್ರಾ – ಕಳೆದ ಕೆಲವು ತಿಂಗಳುಗಳಲ್ಲಿ ಸಾಹಿತ್ಯಾಸಕ್ತರ ಗಮನವನ್ನು ವಿಶÉÃಷವಾಗಿ ಸೆಳೆದಂಥ ಕೃತಿಗಳು. ನಮ್ಮ ಹಿರಿಯ ಲೇಖಕರು ಆತ್ಮಕಥೆಗಳನ್ನು ಪ್ರಕಟಿಸುತ್ತಿದ್ದಾರೆ. ಅವುಗಳಲ್ಲಿ ನಮ್ಮ ಸÉÆÃದರಿಯರು ಬರೆದ ನಿರ್ಭಿಡೆಯ ಕೃತಿಗಳು ಓದುಗ ಬಳಗದ ವಿಶÉÃಷ ಪ್ರಶಂಸೆಗೆ ಪಾತ್ರವಾಗಿವೆ. ನಮ್ಮ ಅನÉÃಕ ಮುಖ್ಯ ಲೇಖಕರ ಕೃತಿಗಳು ಇಂಗ್ಲಿಷ್ ಭಾಷೆಗೆ ಅನುವಾದಗÉÆಂಡು ವಿಶ್ವ ಮಾರುಕಟ್ಟೆಯಲ್ಲಿ ಗಮನ ಸೆಳೆಯುತ್ತಿರುವ ಹÉÆಸ ವಿದ್ಯಮಾನವÉÇಂದು ಈಗ ಚಾಲ್ತಿಗೆ ಬಂದಿದೆ. ವಿವÉÃಕ ಶಾನಭಾಗ, ವಸುಧÉÃಂದ್ರ, ರಾಘವÉÃಂದ್ರ ಪಾಟೀಲ, ಜಯಂತ ಕಾಯ್ಕಿಣಿ ಮೊದಲಾದ ನಮ್ಮ ಲೇಖಕರೀಗ ಇಂಗ್ಲಿಷ್ ಅನುವಾದಗಳಿಂದ ವಿಶ್ವ ಸಾಹಿತ್ಯರಂಗವು ಕನ್ನಡದತ್ತ ಕಣ್ಣು ಹಾಯಿಸುವಂತೆ ಮಾಡಿರುವರು. ಜೊತೆಜೊತೆಗೆ ಕನ್ನಡದ ಅನÉÃಕ ಕ್ಲಾಸಿಕ್ಕುಗಳನ್ನು ಇಂಗ್ಲಿಷ್ ಭಾಷೆಗೆ ತರುವ ಸಾಹಸದಲ್ಲಿ ನಮ್ಮ ಸಮರ್ಥ ಅನುವಾದಕ ಬಳಗ ತÉÆಡಗಿಕÉÆಂಡಿದೆ. ಕನ್ನಡ ಸಾಹಿತ್ಯ ಪರಿಷತ್ತು, ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ, ಕುವೆಂಪು, ಬೇಂದ್ರೆ, ಪುತಿನ, ಆನಂದಕAದ, ಕಟ್ಟೀಮನಿ ಮೊದಲಾದ ಲೇಖಕರ ಹೆಸರಲ್ಲಿ ಸ್ಥಾಪಿತವಾದ ಟ್ರಸ್ಟುಗಳು ಬೆಲೆಬಾಳುವ ಕೃತಿಗಳ ಪ್ರಕಟಣೆಯಲ್ಲಿ ನಿರಂತರವಾಗಿ ತÉÆಡಗಿಕÉÆಂಡಿವೆ. ಬಹು ಸಂಖ್ಯೆಯಲ್ಲಿ ಹÉÆಸ ಕೃತಿಗಳು ಬರುತ್ತಿರುವುದರಿಂದ ನಾನು ಈಚೆಗೆ ಓದಿ ಸಂತÉÆÃಷ ಪಟ್ಟ ಕೆಲವು ಮುಖ್ಯ ಕೃತಿಗಳನ್ನು ಮಾತ್ರ  ನನಗಿಲ್ಲಿ ಪ್ರಸ್ತಾಪಿಸುವುದು ಸಾಧ್ಯವಾಗುತ್ತಿದೆ. ಇಲ್ಲಿ ಉಲ್ಲೇಖಗÉÆಳ್ಳಬೇಕಾದ ಇನ್ನೂ ಅನÉÃಕ ಹೆಸರುಗಳಿವೆ ಎಂಬುದನ್ನು ನಾನು ಬಲ್ಲೆ.

ಈಚಿನ ದಿನಗಳಲ್ಲಿ ಕನ್ನಡ ಗಣಕ ಪರಿಷತ್ತಿನ ಡಾ. ಶ್ರೀನಾಥ ಶಾಸ್ತಿç, ಶ್ರೀ ನರಸಿಂಹಮೂರ್ತಿ ಮತ್ತು ಬಳಗದವರು ಮಾತಾಡಿದ್ದು ಅಕ್ಷರ ರೂಪದಲ್ಲಿ ಮೂಡುವಂಥ ತಂತ್ರಾAಶವನ್ನು ರೂಪಿಸಿದ್ದನ್ನು ಇಲ್ಲಿ ಅಭಿಮಾನದಿಂದ ಸ್ಮರಿಸುತ್ತೇನೆ,.

ಈವತ್ತು ಕನ್ನಡಿಗರ ಉತ್ಸವ ಕಲಬುರ್ಗಿಯಲ್ಲಿ ನಡೆಯುತ್ತಾ ಇದೆ. ಕನ್ನಡ ನಾಡು ನುಡಿಗಳ ಬಗ್ಗೆ ಕನ್ನಡಿಗರ ಅಭಿಮಾನವನ್ನು ಜಾಗೃತಗÉÆಳಿಸುವ ಮಹಾನ್ ವÉÃದಿಕೆಯಿದು. ಲೇಖಕರು, ಪ್ರಕಾಶಕರು, ಅಭಿಮಾನಿಗಳು- ಹೀಗೆ ಸರಸ್ವತೀ ದÉÃಗುಲದ ಮೂರೂ ಆಧಾರ ಸ್ತಂಭಗಳು- ಒಂದÉÃ ಅಸ್ತಿವಾರದಲ್ಲಿ ನೆಲೆಗÉÆಳ್ಳುವ ಈ ಸಮಾರಂಭದಲ್ಲಿ ಕನ್ನಡದ ಹೆಸರಲ್ಲಿ ಎಲ್ಲ ಧರ್ಮೀಯರೂ ಪಂಥೀಯರೂ ಪಕ್ಷೀಯರೂ ಒಂದಾಗುವರು. ಬಹುವಚನಿಗಳೂ  ಸಮಾನಸ್ಕಂಧರೂ ಆಗುವರು. ಸಾವಿರಾರು ಪುಸ್ತಕಗಳು ಮಾರಾಟವಾಗಿ ಕಲಬುರ್ಗಿಯಿಂದ ಕನ್ನಡ ಸರಸ್ವತಿಯ ರಥÉÆÃತ್ಸವ ನಾಡಿನಾದ್ಯಂತ ಮನೆಮನೆಯ ಅಭ್ಯಾಸದ ಕÉÆÃಣೆಗೆ ತಲಪುವುದು. ಎಂಥ ವಿಶ್ವ ವÉÊಶಾಲ್ಯಕ್ಕೆ ಅದೆಂಥ ಪುಟ್ಟ ತಂಗುಮನೆ! ವಿಶ್ವವÉÃ ನಮ್ಮ ಎದೆಗೂಡಲ್ಲಿ ಇಷ್ಟದೀಪವಾಗಿ ಪ್ರತಿಷ್ಠಿತವಾಗುವ ಈ ದಿವ್ಯ ಮುಹೂರ್ತದಂದು ಕನ್ನಡ ಸÉÆÃದರ ಸÉÆÃದರಿಯರಿಗೆ ನನ್ನ ಎದೆತುಂಬಿದ ಶುಭಾಶಯಗಳು. ನನ್ನ ಮಾತುಗಳನ್ನು ಈವರೆಗೆ ತಾಳ್ಮೆಯಿಂದ ಕÉÃಳಿಸಿಕÉÆಂಡ ಕನ್ನಡ ಸÉÆÃದರ ಸÉÆÃದರಿಯರಿಗೆ ವಿನಯಪೂರ್ವಕ ವಂದನೆಗಳು.

 

ಗೆಲ್ಲಲಿ ಕನ್ನಡ; ಬಾಳಲಿ ಕನ್ನಡ

ನಮ್ಮೊಳಮಾತಿನ ಮೆಲ್ಲುಲಿ ಕನ್ನಡ !

 

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)