ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ತತ್ತ್ವರಸಾಯನ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜುಲೈ 3ರಂದು ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ತತ್ತ್ವರಸಾಯನ ಕಾರ್ಯಕ್ರಮ : ಜೂನ್ 18 ಹಾಗೂ 19ರಂದು ಕ.ಸಾ.ಪ.ದಲ್ಲಿ ಕಲಾವಿದರ ಆಯ್ಕೆ ಪ್ರಕ್ರಿಯೆ – ನಾಡೋಜ ಡಾ. ಮಹೇಶ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜುಲೈ 3ರಂದು ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ತತ್ತ್ವರಸಾಯನ ಕಾರ್ಯಕ್ರಮ : ಜೂನ್ 18 ಹಾಗೂ 19ರಂದು ಕ.ಸಾ.ಪ.ದಲ್ಲಿ ಕಲಾವಿದರ ಆಯ್ಕೆ ಪ್ರಕ್ರಿಯೆ – ನಾಡೋಜ ಡಾ. ಮಹೇಶ ಜೋಶಿ

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕ ಹಿತರಕ್ಷಣೆಯ ಜವಾಬ್ದಾರಿಯನ್ನು ಹೊಂದಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು 107 ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿದೆ. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ ಹಿನ್ನೆಲೆಯಲ್ಲಿ ತತ್ತ್ವರಸಾಯನ ಎನ್ನುವ ಶೀರ್ಷಿಕೆಯಲ್ಲಿ ಸಂತ ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ಸಂಗೀತ-ನೃತ್ಯ ಕಾರ್ಯಕ್ರಮವನ್ನು ಭಾನುವಾರ ಜುಲೈ 3 ರಂದು ಸಂಜೆ 4 ರಿಂದ 7ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯ ಅತಿಗಳ ಸಮ್ಮುಖದಲ್ಲಿ ಆಯೋಜಿಸಿದೆ.

ಈ ಕಾರ್ಯಕ್ರಮವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಶಿಶುನಾಳ ಶರೀಫರ ಹಾಗೂ ಕಳಸದ ಗುರು ಗೋವಿಂದ ಭಟ್ಟರ ಪ್ರತಿಷ್ಠಾನ, ಶ್ರೀ ಶಾರದ ವಿದ್ಯಾಪೀಠ – ಕೈಜೋಡಿಸಿವೆ.

ಜುಲೈ 3 ಸಂತ ಶಿಶುನಾಳ ಶರೀಫರು ಹುಟ್ಟಿದ ದಿನ ಹಾಗೂ ಅವರು ದೇಹಬಿಟ್ಟ ದಿನವೂ ಹೌದು. ಈ ದಿನವನ್ನು ಭಾಕ್ಯತೆಯ ದಿನ ಎಂದು ಆಚರಿಸಲಾಗುತ್ತದೆ. ಅ ದಿನ ಸಂತ ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ಸಂಗೀತ, ನೃತ್ಯ ಮೂಲಕ ಅರ್ಥಪೂರ್ಣ ಕಾಯಕ್ರಮ ನಡೆಸಲಾಗುವುದು. ಈ ಕಾರ್ಯಕ್ರಮದ ಮೂಲ ಉದ್ದೇಶ ಭ್ರಾತೃತ್ವ ಭಾವನೆಯನ್ನು, ಸಮಾನತೆ ಮತ್ತು ಸೌಹಾರ್ದತೆಯನ್ನು ಬಿತ್ತರಿಸುವುದಾಗಿದೆ. ಕನ್ನಡ ನಾಡಿನಲ್ಲಿ ಶಾಂತಿ, ಸೌಹಾರ್ದತೆಗೆ ಪೂರಕವಾಗುವ ವಾತಾವರಣ ಸೃಷ್ಟಿಸಿ ಹಾಗೂ ಸಹೋದರತ್ವದ ಭಾವ ಬೆಳೆಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಕಟ್ಟುವ ಉದ್ದೇಶವನ್ನಿರಿಸಿಂಡಿದೆ.

ಈ ಹಿನ್ನೆಲೆಯಲ್ಲಿ ಆಸಕ್ತ ಕಲಾವಿದರನ್ನು, ಜಾನಪದ ಕಲಾತಂಡದವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. ಹೊಸಬರಿಗೆ ಹೆಚ್ಚಿನ ಅವಕಾಶ ನೀಡುವ ನಿಟ್ಟಿನಲ್ಲಿ ಶನಿವಾರ ಜೂನ್ 18 ರಂದು ಬೆಳಗ್ಗೆ 9 ಗಂಟೆಯಿಂದ ತತ್ತ್ವಪದಗಳ ಗಾಯಕರಿಗೆ ಆಯ್ಕೆ ಪ್ರಕ್ರಿಯೆಯನ್ನು ಮತ್ತು ಭಾನುವಾರ ಜೂನ್ 19 ರಂದು ಬೆಳಗ್ಗೆ 9 ಗಂಟೆಯಿಂದ ನೃತ್ಯ ತಂಡದವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆಪ್ರಕ್ರಿಯೆಯನ್ನು ನಡೆಸಲಿದೆ.

ಆಸಕ್ತ ಸಂಗೀತ ಕಲಾವಿದರು, ನೃತ್ಯ ತಂಡದವರು ನೇರವಾಗಿ ಜೂನ್ 18, 19ರಂದು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ವಿಳಾಸ, ಗಾಯನ / ನೃತ್ಯದ ಅನುಭವದ ವಿವರಣೆಗಳುಳ್ಳ ಸ್ವ-ವಿವರಗಳನ್ನೊಳಗೊಂಡ ಅರ್ಜಿಯೊಂದಿಗೆ, ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560 018 ಇಲ್ಲಿ ಹಾಜರಾಗಬೇಕೆಂದು ದೂರದರ್ಶನ ಚಂದನದ ಮಧುರ ಮಧುರವೀ ಮಂಜುಳ ಗಾನ ಖ್ಯಾತಿಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕೋರಿದ್ದಾರೆ.

ಶ್ರೀನಾಥ್ ಜೆ.
ಮಾಧ್ಯಮ ಸಲಹೆಗಾರರು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)