ಡಾ|| ಹೆಚ್. ವಿಶ್ವನಾಥ ಮತ್ತು ಶ್ರೀಮತಿ ಎಂ.ಎಸ್. ಇಂದಿರಾ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

ಪತ್ರಿಕಾ/ಮಾಧ್ಯಮ ಆಹ್ವಾನ
ಡಾ|| ಹೆಚ್. ವಿಶ್ವನಾಥ ಮತ್ತು ಶ್ರೀಮತಿ ಎಂ.ಎಸ್. ಇಂದಿರಾ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಕರ್ನಾಟಕ ಮಕ್ಕಳ ಕೂಟ (ರಿ.), ಬೆಂಗಳೂರು ಇವರು ಸಹಭಾಗಿತ್ವದಲ್ಲಿ ದಿನಾಂಕ ೧೬-೦೭-೨೦೨೨ರ ಶನಿವಾರದಂದು ಸಂಜೆ ೫.೩೦ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಡಾ|| ಹೆಚ್. ವಿಶ್ವನಾಥ ಮತ್ತು ಶ್ರೀಮತಿ ಎಂ.ಎಸ್. ಇಂದಿರಾ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ವಿಸ್ತಾರ ನ್ಯೂಸ್ ಮುಖ್ಯ ಸಂಪಾದಕರಾದ ಶ್ರೀ ಹರಿಪ್ರಕಾಶ್ ಕೋಣೆಮನೆ ಅವರು ಈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮೇಲ್ಕಂಡ ೨೦೨೨ನೆಯ ಸಾಲಿನ ಈ ದತ್ತಿ ಪ್ರಶಸ್ತಿಗೆ ಶ್ರೀ ರಮೇಶ್ ಮುದಿಗೆರೆ ಅವರು ಭಾಜನರಾಗಿದ್ದಾರೆ. ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕರಾದ ಶ್ರೀಮತಿ ಲತಾಕುಮಾರಿ ಅವರು ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಖಿಲ ಕರ್ನಾಟಕ ಮಕ್ಕಳ ಕೂಟ (ರಿ.), ಇದರ ಅಧ್ಯಕ್ಷರಾದ ಶ್ರೀ ಕೆ. ಮೋಹನ್‌ದೇವ್ ಆಳ್ವ ಹಾಗೂ ರಮಣ ಮಹ ಋಷಿ ಅಂಧರ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಟಿ.ವಿ. ಶ್ರೀನಿವಾಸನ್ ಅವರುಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದತ್ತಿ ದಾನಿಗಳಾದ ಡಾ. ಎಚ್. ವಿಶ್ವನಾಥ ಅವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಮಾರಂಭದಲ್ಲಿ, ಸಾಹಿತಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಮೂಡಿಬರುವ ವಿಚಾರಗಳನ್ನು ನಾಡಿನ ಜನತೆಗೆ ತಿಳಿಸಲು ತಮ್ಮ ಪತ್ರಿಕೆಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡಬೇಕಾಗಿ ವಿನಂತಿ. ಇದರೊಂದಿಗೆ ಆಹ್ವಾನಪತ್ರಿಕೆ ಲಗತ್ತಿಸಿದೆ.

ಶ್ರೀನಾಥ ಜೆ.
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು

vishwanatha datti invitation _ 16-07-2022

KASAPA_Press invait_15_07_2022.

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)