ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಕೆ. ಮಹಾಲಿಂಗಯ್ಯ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಕೆ. ಮಹಾಲಿಂಗಯ್ಯ ನೇಮಕ

ಕೆ. ಮಹಾಲಿಂಗಯ್ಯೆ ಅಧಿಕಾರ ಸ್ವಿಕಾರ

ಭಾವಚಿತ್ರ: ಕನ್ನಡಪರ ಸಂಘಟಕರೂ ಹಾಗೂ ಪರಿಷತ್ತಿನ ಹಿತೈಷಿಗಳೂ ಆದ ಶ್ರೀ ಕೆ. ಮಹಾಲಿಂಗಯ್ಯ ಅವರನ್ನು ಗೌರವ ಕಾರ್ಯದರ್ಶಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಮಹತ್ವದ ಜವಾಬ್ದಾರಿಯನ್ನು ನೀಡಿದ್ದರು.

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಶ್ರೀ ಕೆ. ಮಹಾಲಿಂಗಯ್ಯ ಅವರನ್ನು ಗೌರವ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕನ್ನಡಪರ ಸಂಘಟಕರೂ ಹಾಗೂ ಪರಿಷತ್ತಿನ ಹಿತೈಷಿಗಳೂ ಆದ ಶ್ರೀ ಕೆ. ಮಹಾಲಿಂಗಯ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ ಸಂಖ್ಯೆ ೯(೨) ರ ಅಡಿಯಲ್ಲಿ ಶ್ರೀ ಕೆ.ಮಹಾಲಿಂಗಯ್ಯ ಅವರನ್ನು ‘ಗೌರವ ಕಾರ್ಯದರ್ಶಿ’ಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಶ್ರೀನಾಥ್‌ ಜೆ.
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು.
KASAPA-ಕೆ. ಮಹಾಲಿಂಗಯ್ಯೆ ಅಧಿಕಾರ ಸ್ವಿಕಾರ-17-08-2022

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)